ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಅನ್ನೋದು ಖಚಿತವಾಗಿತ್ತು. ಆದರೆ ವಿಷವಿಟ್ಟವರು ಯಾರು ಅನ್ನೋದು ಗೊತ್ತಾಗಿರಲಿಲ್ಲ. ಇದೀಗ ಅದು ಕೂಡ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದುಪೊಲೀಸ್ ಮತ್ತು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಮಾದ ಅಲಿಯಾಸ್ ಮಾದುರಾಜು ಹಾಗೂ ನಾಗರಾಜ್ ಬಂಧಿತರು. ಸದ್ಯ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗಳಿಂದ ವಿಚಾರಣೆ ನಡಲಾಗುತ್ತಿದೆ.
ಪ್ರಕರಣ ಬೆನ್ನಲ್ಲೇ ಮಾದ ಅಲಿಯಾಸ್ ಮಾದುರಾಜು ಪರಾರಿಯಾಗಿದ್ದ. ಕೊಳ್ಳೇಗಾಲ ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕೊಪ್ಪ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಮಾದುರಾಜು ನನ್ನು ಬಂಧಿಸಲಾಗಿದೆ.
ಪೊಲೀಸರು ವಿಚಾರಣೆ ನಡೆಸಿದಾಗ ಮಾದ ಆರೋಪಿ ಎಂಬುದು ದೃಢವಾಗಿದ್ದು, ತನ್ನ ಹಸುವನ್ನ ಕೊಂದಿದ್ದಕ್ಕೆ ವಿಷ ಹಾಕಿರುವುದಾಗಿ ಮಾದ ವಿಚಾರಣೆ ವೇಳೆ ತಪ್ಪೊಪ್ಪಿಗೆ ನೀಡಿದ್ದಾರೆ. ಆದರೆ ಪುತ್ರ ಮಾದನನ್ನು ಬಚಾವ್ ಮಾಡಲು ತಂದೆ ಶಿವಣ್ಣ ನಾನೇ ವಿಷ ಹಾಕಿರುವುದಾಗಿ ಸ್ಟೇಟ್ಮೆಂಟ್ ಕೊಟ್ಟಿದ್ದರು. ಹಾಗಾಗಿ ಮಾದ ತಂದೆ ಶಿವಣ್ಣನನ್ನು ಪ್ರಕರಣದಿಂದ ಕೈಬಿಡಲಾಗಿದೆ.