ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯೆಲ್ಲೋ ಅಲರ್ಟ್: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ, ಕರಾವಳಿ ಭಾಗದ ಈ ಮೂರು ಜಿಲ್ಲೆಗಳಿಗೆ ಒಂದು ವಾರದವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆ ಮುನ್ಸೂಚನೆ: ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಎಲ್ಲಿ ಮಳೆ ವರದಿ: ಆಗುಂಬೆ, ಯಲ್ಲಾಪುರ, ಸಿದ್ದಾಪುರ, ಧರ್ಮಸ್ಥಳ, ಶೃಂಗೇರಿ, ಕೊಪ್ಪ, ಕಳಸ, ಬಾಳೆಹೊನ್ನೂರು, ಬೆಳ್ತಂಗಡಿ, ಪುತ್ತೂರು, ಮೂಡಿಗೆರೆ, ಸುಳ್ಯ, ಮಂಗಳೂರು, ಕುಮಟಾ, ಕಾರ್ಕಳ, ನಾಪೋಕ್ಲು, ಕೊಟ್ಟಿಗೆಹಾರ, ಕುಂದಾಪುರ, ಬೆಳಗಾವಿ, ಉಡುಪಿ, ಮುಂಡಗೋಡು, ಸೋಮವಾರಪೇಟೆ ಹಾಗೂ ಅರಕಲಗೋಡಿನಲ್ಲಿ ಮಂಗಳವಾರ ಹೆಚ್ಚಿನ ಮಳೆಯಾಗಿದೆ.