SSLCಯಲ್ಲಿ ಕನ್ನಡ ಭಾಷಾ ಪರೀಕ್ಷೆಯ ಅಂಕ ಕಡಿತಕ್ಕೆ ಬರಗೂರು ರಾಮಚಂದ್ರಪ್ಪ ವಿರೋಧ

Ravi Talawar
SSLCಯಲ್ಲಿ ಕನ್ನಡ ಭಾಷಾ ಪರೀಕ್ಷೆಯ ಅಂಕ ಕಡಿತಕ್ಕೆ ಬರಗೂರು ರಾಮಚಂದ್ರಪ್ಪ ವಿರೋಧ
WhatsApp Group Join Now
Telegram Group Join Now

ಬೆಂಗಳೂರು, ಜುಲೈ 09: ಕನ್ನಡ ಸೇರಿದಂತೆ ಎಸ್‌ಎಸ್‌ಎಲ್‌ಸಿಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಸದ್ಯ ಈ ವಿಚಾರವಾಗಿ ಸಾಕಷ್ಟು ವಿರೋಧ ಕೇಳಿಬರುತ್ತಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆದಿದ್ದು, ಅಂಕಗಳನ್ನ 100ಕ್ಕೆ ಇಳಿಕೆ ಮಾಡುವುದು ಬೇಡವೆಂದು ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article