ರಾಜ್ಯದಲ್ಲಿ ಮಾರ್ಚ್ 31ರವರೆಗೆ ಮಳೆ: ಕೆಲ ಜಿಲ್ಲೆಗಳಲ್ಲಿ ಒಣಹವೆ

Ravi Talawar
ರಾಜ್ಯದಲ್ಲಿ ಮಾರ್ಚ್ 31ರವರೆಗೆ ಮಳೆ: ಕೆಲ ಜಿಲ್ಲೆಗಳಲ್ಲಿ ಒಣಹವೆ
WhatsApp Group Join Now
Telegram Group Join Now

ಬೆಂಗಳೂರು,ಮಾ.27:ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, ಸೆಕೆಯಿಂದಾಗಿ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನದ, ಹಾಸನ, ಕೊಡಗು, ಕೋಲಾರ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಾರ್ಚ್ 31ವರೆಗೆ ಮಳೆಯಾಗಲಿದೆ.

ಇನ್ನು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಿನ್ನೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿರುಬೇಸಿಗೆಯಿಂದ ಕಂಗೆಟ್ಟಿದ್ದ ಜನತೆಗೆ ವರುಣ ತಂಪೆರದಿದ್ದಾನೆ.

WhatsApp Group Join Now
Telegram Group Join Now
Share This Article