ಬಳ್ಳಾರಿ.ಆ.11 : ಕಳೆದ ಹಲವು ದಶಕಗಳಿಂದ ಕೇಂದ್ರ ಸರ್ಕಾರ ಇಂದಿರಾಗಾAಧಿ ಡಿಸಬಿಲಿಟಿ ಪೆನ್ಸನ್ ಸ್ಕೀಮ್ (IಉಓಆPS) ಅಡಿಯಲ್ಲಿ ಕೇವಲ 30 ರೂಪಾಯಿಗಳಿಂದ ಆರಂಭವಾದ ಇದು ಕಳೆದ ಹಲವು ದಶಕಗಳಿಂದ ಕೇವಲ 100-200 ರೂಪಾಯಿಗಳನ್ನಷ್ಟೆ ಹೆಚ್ಚಳ ಮಾಡುತ್ತಾ ಬರುತ್ತಿದೆ. ಇದು ಯಾವುದಕ್ಕೂ ಸಾಲವುದಿಲ್ಲ. ಇದನ್ನು ಕೇಂದ್ರ ಸರ್ಕಾರ 5000ಕ್ಕೆ ಮತ್ತು ರಾಜ್ಯ ಸರ್ಕಾರ 5000ದಂತೆ ಒಟ್ಟು 10,000 ರೂಪಾಯಿಗಳಿಗೆ ಹೆಚ್ಚಿಸಬೇಕೆಂದು ಅಂಗವಿಕಲರ ಮತ್ತು ಪಾಲಕರ ಒಕ್ಕೂಟದ ಅಧ್ಯಕ್ಷ ಜಿ ಎನ್ ನಾಗರಾಜ್ ಸರ್ಕಾರಗಳನ್ನು ಒತ್ತಾಯಿಸಿದರು.
ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿ, ನೆರೆಯ ಆಂಧ್ರಪ್ರದೇಶದಲ್ಲಿ 6000ರೂಪಾಯಿಗಳನ್ನು ನೀಡುತ್ತಿದೆ ಶೇ 80ರಷ್ಟು ವಿಕಲತೆ ಹೊಂದಿರುವವರಿಗೆ ಹತ್ತು ಸಾವಿರ, ನೂರರಷ್ಟು ವಿಕಲತೆ ಹೊಂದಿರುವವರಿಗೆ 15ಸಾವಿರ ರೂಪಾಯಿಗಳನ್ನು ನೀಡುತ್ತಿದೆ, ಮುಂದುವರೆದು ರಾಜಸ್ಥಾನದಲ್ಲಿ ಬೆಲೆ ಏರಿಕೆಯ ಸೂಚ್ಯಂಕಕ್ಕೆ ಅನುಗುಣವಾಗಿ ತುಟ್ಟಿ ಭತ್ಯೆಯ ರೂಪದಲ್ಲಿ ವಾರ್ಷಿಕ ಶೇ 15ರಷ್ಟು ಪಿಂಚಣಿಯನ್ನು ಹೆಚ್ಚಲ ಮಾಡಲು ಶಾಸನ ಸಭೆಯಲ್ಲಿ ಅಂಗೀಕರಿಸಲಾಗಿದೆ. ಅದೇ ಪ್ರಕಾರವಾಗಿ ನಮ್ಮ ರಾಜ್ಯದಲ್ಲೂ ಸಹ ಹತ್ತು ಸಾವಿರ ರೂಪಾಯಿಗಳ ಪಿಂಚಣಿಯನ್ನು ನೀಡಬೇಕೆಂದು ಇದೇ ತಿಂಗಳಲ್ಲಿ ರಾಜಭವನ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಅಂಗವಿಕಲರ ರೈತ ಸಂಘ ಕಟ್ಟಲು ನಿರ್ಧಾರ:-
ವಿಕಲಚೇತನರು ಕೃಷಿ ಕೆಸಲವನ್ನು ಮಾಡಲು ತೊಂದರೆಯಾಗುತ್ತಿದೆ. ತುಂಡು ಭೂಮಿಯಿರುವ ವಿಕಲಚೇತನರಿಗೆ ವಿಶೇಷವಾಗಿ ವಾತವರಣಗಳನ್ನು ಸೃಷ್ಟಿಸುವ ಸಲುವಾಗಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಇಲಾಖೆಗಳು ವಿಕಲಚೇತನ ಸ್ನೇಯಾದ ಯಂತ್ರೋಪಕರಣಗಳನ್ನು ಅಭಿವೃದ್ಧಿಪಡಿಸಬೇಕು ಅಥವಾ ಅವುಗಳನ್ನು ಹೊಂದಲು ಹೆಚ್ಚಿನ ಧನಸಹಾಯವನ್ನು ಒದಗಿಸಬೇಕೆಂದು ಈ ಸಂದರ್ಭದಲ್ಲಿ ಸರ್ಕಾರವನ್ನು ಅಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಂಗಪ್ಪ ದಾಸರ, ಮತ್ತು ಆರ್ ಯಶಸ್ವಿ ಗುರುಸಿದ್ಧಮೂರ್ತಿ ಸತ್ಯಬಾಬು ಇದ್ದರು.