ಬಸವಜಯಮೃತ್ಯುಂಜಯ ಸ್ವಾಮೀಜಿ ದರ್ಶನ ಪಡೆದ ಶೆಟ್ಟರ್

Ravi Talawar
ಬಸವಜಯಮೃತ್ಯುಂಜಯ ಸ್ವಾಮೀಜಿ ದರ್ಶನ ಪಡೆದ ಶೆಟ್ಟರ್
WhatsApp Group Join Now
Telegram Group Join Now

ಬೆಳಗಾವಿ,ಮಾ.29: ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ್ ಅವರು ಇಂದು ಬೆಳಗಾವಿ ನಗರದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀಮತಿ ಮಂಗಳಾ ಅಂಗಡಿ, ಮಾಜಿ ಶಾಸಕರಾದ ಶ್ರೀ ಸಂಜಯ ಪಾಟೀಲ್, ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಪ್ರಮುಖರಾದ ಆರ್.ಕೆ.ಪಾಟೀಲ್, ರಾಜೇಂದ್ರ ಹರಕುಣಿ, ಮುರಗೇಂದ್ರಗೌಡ ಪಾಟೀಲ್ ಹಾಗೂ ಪಕ್ಷದ ಪದಾಧಿಕಾರಿಗಳು,ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article