ಸತೀಶ್ ಸೈಲ್‌ಗೆ ಅನಾರೋಗ್ಯ ಹಿನ್ನೆಲೆಯಲ್ಲಿ 7 ದಿನಗಳ ಮಧ್ಯಂತರ ಜಾಮೀನು

Ravi Talawar
ಸತೀಶ್ ಸೈಲ್‌ಗೆ ಅನಾರೋಗ್ಯ ಹಿನ್ನೆಲೆಯಲ್ಲಿ 7 ದಿನಗಳ ಮಧ್ಯಂತರ ಜಾಮೀನು
WhatsApp Group Join Now
Telegram Group Join Now

ಬೆಂಗಳೂರು: ಬೇಲೆಕೇರಿ ಅದಿರು ಅಕ್ರಮವಾಗಿ ವಿದೇಶಕ್ಕೆೆ ಸಾಗಾಟ ಮಾಡಿದ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅನಾರೋಗ್ಯ ಹಿನ್ನೆಲೆಯಲ್ಲಿ 7 ದಿನಗಳ ಮಧ್ಯಂತರ ಜಾಮೀನು ನೀಡಿ, ಗುರುವಾರ ಆದೇಶ ಹೊರಡಿಸಿದೆ.

ಸತೀಶ್ ಸೈಲ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆೆ ಬುಧವಾರ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆರೋಪಿ ಸೈಲ್ ಅವರನ್ನು ಸೆಪ್ಟೆಂಬರ್​​ 12ರ ವರೆಗೆ ಇ.ಡಿ ವಶಕ್ಕೆೆ ನೀಡಿ ಆದೇಶಿಸಿದ್ದರು.

ಆದರೆ, ಸತೀಶ್ ಸೈಲ್‌ ಉಸಿರಾಟದ ಸಮಸ್ಯೆೆ ಹಾಗೂ ಮಧುಮೇಹದಿಂದ ಬಳಲುತ್ತಿದ್ದಾರೆ. ಹೀಗಾಗಿ, ಜಾಮೀನು ಮಂಜೂರು ಮಾಡಬೇಕು ಎಂದು ಸತೀಶ್ ಸೈಲ್ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದರು. ಜೊತೆಗೆ, ಅವರ ಸದ್ಯದ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಕಸ್ಟಡಿ ಅವಧಿಯಲ್ಲೇ 7 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
Share This Article