ಬೆಂಗಳೂರು, ಸೆಪ್ಟೆಂಬರ್ 12: ಹಿಮಾಚಲ ಪ್ರದೇಶದಲ್ಲಿ ಜೂನ್ 20ರಂದು ಮಾನ್ಸೂನ್ ಆರಂಭವಾದಾಗಿನಿಂದ ಇದುವರೆಗೂ ಮಳೆ, ಪ್ರವಾಹ, ಭೂಕುಸಿತದಂತಹ ದುರಂತಗಳಿಂದ ಒಟ್ಟು 380 ಜನರು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಉಂಟಾಗಿರುವ ನೈಸರ್ಗಿಕ ದುರಂತಕ್ಕೆ ಸಂತಾಪ ಸೂಚಿಸಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM ಹಿಮಾಚಲ ಪ್ರದೇಶದ ವಿಪತ್ತು ಪರಿಹಾರ ಮತ್ತು ಪುನರ್ವಸತಿಗೆ ಸಹಾಯ ಮಾಡಲು 5 ಕೋಟಿ ರೂ. ಹಣ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.
ಪ್ರವಾಹಪೀಡಿತ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ಆರ್ಥಿಕ ಸಹಾಯ

‘ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ, ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ. ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಅದನ್ನು ಎದುರಿಸಬೇಕು. ಹೀಗಾಗಿ, ಕರ್ನಾಟಕ ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿದ್ದೇವೆ’ ಎಂದು ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ.