ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಡಳಿಯ ಮಂಡಳಿಯ ಸರ್ವ ಸದಸ್ಯರೊಂದಿಗೆ
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರನ್ನು ಭೇಟಿಯಾಗಿ ಸನ್ಮಾನಿಸಿದರು.
ಬೆಳಗಾವಿಯ ಐಟಿಸಿ ವೆಲ್ ಕಂ ಹೊಟೆಲ್ ಗೆ ತೆರಳಿ ಇಬ್ಬರನ್ನೂ ಸನ್ಮಾನಿಸಲಾಯಿತು.