ಹದಗೆಟ್ಟ ರಸ್ತೆ ಕ್ರಮಕ್ಕೆ ಮನವಿ

Ravi Talawar
ಹದಗೆಟ್ಟ ರಸ್ತೆ ಕ್ರಮಕ್ಕೆ ಮನವಿ
WhatsApp Group Join Now
Telegram Group Join Now
ಬಳ್ಳಾರಿ,ಅ.19.. ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಗ್ರಾಮೀಣ ಸ್ಥಳೀಯ ಸಮಿತಿಯ ವತಿಯಿಂದ ಪಿಡಬ್ಲುಡಿ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಬಳ್ಳಾರಿ ನಗರದಿಂದ ತಾಳೂರಿಗೆ ಮಾರ್ಗ ಕಲ್ಪಿಸುವ ರಸ್ತೆಯು ಗುಡಾರ ನಗರದಿಂದ ಶ್ರೀಧರಗಡ್ಡೆ ಗ್ರಾಮದವರೆಗೆ ತುಂಬಾ ಹದಗೆಟ್ಟಿದ್ದು, ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ತೆಗ್ಗು-ದಿಣ್ಣೆಗಳನ್ನು ತಪ್ಪಿಸಲು ಹೋಗಿ ಹಲವಾರು ವಾಹನಗಳು ಅಪಘಾತಕ್ಕೆ ಒಳಗಾಗಿವೆ. ಇದು ನಿರಂತರ ೨ ವರ್ಷಗಳಿಂದಲೂ ಅವ್ಯವಸ್ಥೆ ಇದೆ. ಇದರ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರು ಪ್ರಯೋಜನ ಆಗಿಲ್ಲ. ಹಾಗಾಗಿ ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಗ್ರಾಮೀಣ ಸ್ಥಳೀಯ ಸಮಿತಿಯ ಸದಸ್ಯರು ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಎ.ದೇವದಾಸ್, ಸದಸ್ಯರುಗಳಾದ ಸೋಮಶೇಖರ ಗೌಡ, ಹನುಮಂತಪ್ಪ, ಜಗದೀಶ್ ನೇಮಕಲ್, ನಿಂಗರಾಜ. ಟಿ, ಪ್ರಮೋದ್ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article