ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ

Ravi Talawar
ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ
WhatsApp Group Join Now
Telegram Group Join Now
ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ನಗರದ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.
 ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಅವರು ಕಿತ್ತೂರ ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಾಂಡೇಲಿ ಸರ್ಕಾರಿ ಪದವಿ ಮಹಾವಿದ್ಯಾಲಯದ ಕನ್ನಡದ ಪ್ರಾಧ್ಯಾಪಕರು ಹಾಗೂ ಬೆಳಗಾವಿ ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‍ನ ಅಧ್ಯಕ್ಷೆ ಡಾ. ವಿನಯಾ ಒಕ್ಕುಂದ ಅವರು ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ  ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.   ಹಿರಿಯ ನ್ಯಾಯವಾದಿ ಚಂದ್ರಶೇಖರ ಎಸ್. ನೇಗಿನಾಳ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಸದಸ್ಯ ಶಂಭು ಸಾಲಿಮನಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ವೇದಿಕೆಯಲ್ಲಿ ಸಹಾಯಕ ಪೋಲಿಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ವೀರಮಾತೆ ಕಿತ್ತೂರ ರಾಣಿ ಚನ್ನಮ್ಮಾಜಿ ಪ್ರತಿಷ್ಟಾಪನ. ನಾಗರಾಜ ಶಿ. ಪಟ್ಟಣಶೆಟ್ಟಿ, ನಿಂಗಣ್ಣ ಕರಿಕಟ್ಟಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಎಂ. ಪಾಟೀಲ ಅವರು ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ಸುಧಾ ಕಬ್ಬೂರ ಮತ್ತು ತಂಡದವರಿಂದ ಕಿತ್ತೂರು ರಾಣಿ ಚನ್ನಮ್ಮ ಕುರಿತ ರೂಪಕವನ್ನು ಪ್ರಸ್ತುತಪಡಿಸಲಾಯಿತು.   ಕಾರ್ಯಕ್ರಮದಲ್ಲಿ ಸಮುದಾಯದ ಗುರು ಹಿರಿಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article