ಬಳ್ಳಾರಿ,ಅ.31 ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟçವಾಗಿದ್ದು, ಪ್ರಪಂಚದಾದ್ಯAತ ರಾಷ್ಟಿçÃಯ ಐಕ್ಯತೆ ಸಾರಿದ ದೇಶ ನಮ್ಮದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಹೇಳಿದರು.
ರಾಷ್ಟಿçÃಯ ಐಕ್ಯತಾ ದಿನಾಚರಣೆ ಅಂಗವಾಗಿ ಸ್ವಾತಂತ್ರö್ಯ ಹೋರಾಟಗಾರ, ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನದ ವಾರ್ಷಿಕೋತ್ಸವದ ನಿಮಿತ್ತ ಸಾರ್ವಜನಿಕರಲ್ಲಿ ನಾಗರಿಕರ ಸುರಕ್ಷತೆ ಮತ್ತು ಜವಾಬ್ದಾರಿಗಳ ಕುರಿತು ಅರಿವು ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ರನ್-ಫಾರ್-ಯುನಿಟಿ (ಏಕತೆಗಾಗಿ ಓಟ) ಮ್ಯಾರಥಾನ್ ಓಟ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ಅಖಂಡ ಭಾರತ ಒಗ್ಗೂಡುವಿಕೆಗೆ ಕಾರಣೀಭೂತರಾದ ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸೇವೆ ಅಪಾರವಾಗಿದೆ. ಭಾರತ ದೇಶವು ಸ್ವಾತಂತ್ರö್ಯದ ನಂತರ ಎಲ್ಲಾ ರಾಜ್ಯಗಳನ್ನು ವಿಲೀನಗೊಳಿಸಲು ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಒಟ್ಟುಗೂಡಿಸಲು ಸಾಕಷ್ಟು ಶ್ರಮಿಸಿದ್ದರು ಎಂದು ತಿಳಿಸಿದರು.
ಭಾರತದಲ್ಲಿ 565 ಕ್ಕೂ ಹೆಚ್ಚು ರಾಜಪ್ರಭುತ್ವದ ಸಂಸ್ಥಾನಗಳನ್ನು ಒಟ್ಟುಗೂಡಿಸಿ ಒಂದೇ ಒಕ್ಕೂಟ ವ್ಯವಸ್ಥೆಯನ್ನು ರಚಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಉಕ್ಕಿನಂತಹ ದೃಢತೆಯೇ ದೇಶದ ಏಕತೆಗೆ ಕಾರಣವಾಗಿದೆ. ರಾಜಿ ಸಂಧಾನ ಮತ್ತು ಮಿಲಿಟರಿ ಪೋರ್ಸ್ಗಳ ಮೂಲಕ ಏಕತೆಯನ್ನು ಮೂಡಿಸಿದರು. ಹಾಗಾಗಿ ಸ್ವತಂತ್ರ ಭಾರತದ ಮೊದಲ ಉಪಪ್ರಧಾನಿ ಮತ್ತು ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ಅಕ್ಟೋಬರ್ 31 ರಂದು ‘ರಾಷ್ಟಿçÃಯ ಏಕತಾ ದಿವಸ’ ವನ್ನಾಗಿ ಆಚರಿಸಲಾಗುತ್ತದೆ ಎಂದರು.
ಸಾರ್ವಜನಿಕರು ಆನ್ ಲೈನ್ ವಂಚನೆಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದು, ಯಾರಾದರೂ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವೈಯಕ್ತಿಕ ಮಾಹಿತಿ ಕೇಳಿದರೆ ಉತ್ತರಿಸಬಾರದು. ಯುವ ಸಮುದಾಯ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಪ್ರಸ್ತುತದಲ್ಲಿ ಯುವ ಸಮುದಾಯ ಆನ್ಲೈನ್ ಗೇಮ್, ಆನ್ ಲೈನ್ ವಂಚನೆಗಳಿAದ ದೂರವಿರಬೇಕು. ಮೊಬೈಲ್ ನಲ್ಲಿ ಬರುವ ಯಾವುದೇ ರೀತಿಯ ಗೊತ್ತಿರದ ಫೈಲ್ಗಳ ಮೇಲೆ ಕ್ಲಿಕ್ ಮಾಡಬಾರದು. ಇದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆ ಹೆಚ್ಚು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳಿಂದ ದೂರ ಉಳಿಯುತ್ತೇನೆ, ಸಂಚಾರಿ ನಿಯಮಗಳನ್ನು ಪಾಲಿಸುತ್ತೇನೆ, ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ರಕ್ಷಿಸುತ್ತೇನೆ ಹಾಗೂ ವಿವಿಧ ಪಾಲನೆಗಳನ್ನೊಳಗೊಂಡ ಪ್ರತಿಜ್ಞಾ ವಿಧಿ ಕೈಗೊಳ್ಳಲಾಯಿತು ಮತ್ತು ಸಹಿ ಸಂಗ್ರಹ ಅಭಿಯಾನ ಮೂಲಕ ಗಣ್ಯರು ಸಹಿ ಹಾಕಿದರು.
ಮ್ಯಾರಥಾನ್ ಓಟವು ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಆರಂಭಗೊAಡು ಇಂದಿರಾ ವೃತ್ತ- ನೂತನ ಜಿಲ್ಲಾಡಳಿತ ಭವನ- ಎಂ.ಜಿ ರಸ್ತೆ- ಅನಂತಪುರ ಬೈಪಾಸ್ ಕ್ರಾಸ್ ನಿಂದ ಮರಳಿ ಎಂ.ಜಿ ವೃತ್ತ- ಇಂದಿರಾ ವೃತ್ತ- ಎಸ್. ಎನ್.ಪೇಟೆ ಕ್ರಾಸ್(ಕೂಲ್ ಕಾರ್ನರ್)- ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ತಲುಪಿ ಮುಕ್ತಾಯಗೊಂಡಿತು.
ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ಪ್ರಶಸ್ತಿ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಯಿತು.
*ವಿಜೇತರು:*
*ಪುರುಷ ವಿಭಾಗ:*
ಪ್ರಥಮ ಬಹುಮಾನ(10 ಸಾವಿರ ನಗದು): ಪುರುಷೋತ್ತಮ ಬಳ್ಳಾರಿ.
ದ್ವಿತೀಯ ಬಹುಮಾನ(5 ಸಾವಿರ ನಗದು): ಶಿವಾನಂದ ಬೆಳಗಾವಿ.
ತೃತೀಯ ಬಹುಮಾನ(3 ಸಾವಿರ ನಗದು): ಸುನೀಲ್ ಬೆಳಗಾವಿ.
*ಮಹಿಳಾ ವಿಭಾಗ:*
ಪ್ರಥಮ ಬಹುಮಾನ(10 ಸಾವಿರ ನಗದು): ಶಾಹೀನ್ ಎಸ್.ಡಿ ಹುಬ್ಬಳ್ಳಿ.
ದ್ವಿತೀಯ ಬಹುಮಾನ(5 ಸಾವಿರ ನಗದು): ಯು.ಶಿರೀಷ ಬಳ್ಳಾರಿ.
ತೃತೀಯ ಬಹುಮಾನ(3 ಸಾವಿರ ನಗದು): ವಿಜಯಲಕ್ಷಿö್ಮ ಧಾರವಾಡ.
ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾ ಬಸವರಾಜ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ನವೀನ್ ಕುಮಾರ್, ಡಿಎಸ್ಪಿ ಗಳಾದ ನಂದಾರೆಡ್ಡಿ, ಪ್ರಸಾದ್ ಗೋಖಲೆ, ಮಾಲತೇಷ ಕೋನಬೇವು, ತಿಪ್ಪೇಸ್ವಾಮಿ, ಸಂತೋಷ್ ಚವ್ಹಾಣ್, ಸಿಪಿಐ ಗಳಾದ ಅಯ್ಯನಗೌಡ ಪಾಟೀಲ್, ಮಹಾಂತೇಶ್, ರವಿಚಂದ್ರ, ಹನುಮಂತಪ್ಪ, ಚಂದನಗೋಪಾಲ್, ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆAಟ್ ಶೇಖಸಾಬ್  ಸೇರಿದಂತೆ ಪೊಲೀಸ್ ಅಧಿಕಾರಿಗಳು, ನಿವೃತ್ತ ಯೋಧರು, ಐಎಂಎ ಸದಸ್ಯರು, ಬಳ್ಳಾರಿ ರನ್ನರ್ಸ್ ಅಸೋಷಿಯೇಷನ್ ಹಾಗೂ ರಾಜ್ಯದ ವಿವಿಧೆಡೆಯಿಂದ 1500 ಪುರುಷ, ಮಹಿಳೆಯರು ಭಾಗವಹಿಸಿದ್ದರು.

 
		 
		 
		
