ಬಳ್ಳಾರಿ : 04. ಸರ್ವಶ್ರೇಷ್ಠ ಮಾತೃಭಾಷೆಯಾದ ಕನ್ನಡವು ಜೀವ ಚೈತನ್ಯದಂತೆ ಕ್ಷಾತ್ರ ತೇಜಸ್ಸನ್ನು ಹೊಂದಿದ್ದು, ಕನ್ನಡದ ಮನಸ್ಸುಗಳ ಮೂಲಕ ಅಸ್ಮಿತೆಯನ್ನು ಜೀವಾಳವಾಗಿಸಿಕೊಂಡಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಉಪಾಧ್ಯಕ್ಷರಾದ ಸಿದ್ಧರಾಮ ಕಲ್ಮಠ ಹೇಳಿದರು.
ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಿದ್ದ ೭೦ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಚರಿತ್ರೆಯ ಪುಟಗಳಿಂದ ಭಾಷೆ ಮತ್ತು ಸಂಸ್ಕೃತಿಯ ಸೊಗಡನ್ನು ಮೆಲುಕು ಹಾಕಿದಾಗ ಕನ್ನಡದ ಅರಸರ ಆಳ್ವಿಕೆಯ ವಿಶಾಲ ವ್ಯಾಪ್ತಿ ಗಮನಕ್ಕೆ ಬರುತ್ತದೆ. ರಾಷ್ಟçಕೂಟರು, ಕದಂಬರು, ಗಂಗರು, ಚಾಲುಕ್ಯರು, ಹೊಯ್ಸಳರು, ವಿಜಯನಗರ ಸಂಸ್ಥಾನ, ಒಡೆಯರು, ಪಾಳೆಗಾಗರಂತಹ ರಾಜಮನೆತನಗಳು ಕನ್ನಡದ ಕುರುಹುಗಳನ್ನು ಜಗತ್ತಿನಾದ್ಯಂತ ಶಾಸನ, ಗ್ರಂಥ ಮತ್ತು ತಾಳೆಗರಿಗಳ ರೂಪದಲ್ಲಿ ಪಸರಿಸಿದ್ದಾರೆ ಎಂದರು.
೧೯೪೦ರಲ್ಲಿ ಕಾವು ಪಡೆದ ಕರ್ನಾಟಕ ಏಕೀಕರಣ ಚಳುವಳಿಗೆ ಮುನ್ನುಡಿ ಬರೆದಿದ್ದು ಬಳ್ಳಾರಿ ಜಿಲ್ಲೆ ಎಂದು ನೆನೆಸಿದರು. ಕನ್ನಡ ಭಾಷೆಗಾಗಿ ಪಿಂಜಾರ ರಂಜಾನ್ ಸಾಬ್ ಅವರ ವೀರಮರಣ, ಕುಂ. ಚನ್ನಬಸಪ್ಪ, ಅಲ್ಲಂ ಸುಮಂಗಳಮ್ಮ ಮೊದಲಾದವರ ಹೋರಾಟ ಕಥನ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿಗಳಾದ ಪ್ರೊ ಎಂ ಮುನಿರಾಜು ಮಾತನಾಡಿ, ರಾಜ್ಯದಲ್ಲಿ ಪರಭಾಷಿಗರ ಹಾವಳಿ ಹೆಚ್ಚಾಗಿದೆ. ಅದರಲ್ಲೂ ರಾಜಧಾನಿಯಲ್ಲಿ ಉತ್ತರ ಭಾರತದವರ ವಲಸೆಯಿಂದ ಮೂಲಕ ಕನ್ನಡಿಗರಿಗೆ ಧಕ್ಕೆಯಾಗಿದೆ. ನಮ್ಮ ಮಾತೃಭಾಷೆಯನ್ನು ಉಳಿಸಲು, ಬೆಳೆಸಲು ನಾವೆಲ್ಲ ಕೇವಲ ನವಂಬರ್ ತಿಂಗಳ ಕನ್ನಡಿಗರಾಗದೆ ನಮ್ಮ ಉಸಿರಿರುವರೆಗೆ ಭಾಷಾಭಿಮಾನವನ್ನು ಮೆರೆಯಬೇಕು ಎಂದು ಕರೆ ನೀಡಿದರು.
ವಿವಿಯ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ ಸಂತೋಷ್ ಜಿ ಕೆ ಅತಿಥಿಗಳನ್ನು ಸ್ವಾಗತಿಸಿದರು.ವಿವಿಯ ಕುಲಸಚಿವರಾದ ಸಿ ನಾಗರಾಜು, ಪರೀಕ್ಷಾಂಗ ಕುಲಸಚಿವರಾದ ಪ್ರೊ ಎನ್ ಎಂ ಸಾಲಿ, ಕಲಾ ನಿಕಾಯದ ಡೀನರಾದ ಪ್ರೊ ರಾಬರ್ಟ್ ಜೋಸ್, ಪ್ರದರ್ಶನ ಕಲೆ ಮತ್ತು ನಾಟಕ ವಿಭಾಗದ ಮುಖ್ಯಸ್ಥರಾದ ಪ್ರೊ ಶಾಂತನಾಯ್ಕ್ ಎನ್ ವೇದಿಕೆಯಲ್ಲಿದ್ದರು.
ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮೊದಲು ಗಣ್ಯರು ರಾಷ್ಟç ಧ್ವಜಾರೋಹಣವನ್ನು ನೆರವೇರಿಸಿ ನಂತರ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.ವಿವಿಯ ವಾಣಿಜ್ಯಶಾಸ್ತç ವಿಭಾಗದ ಉಪನ್ಯಾಸಕರುಗಳು ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಕನ್ನಡ ಗೀತೆಗಳನ್ನು ಹಾಡಿದರು.ಎಲ್ಲ ನಿಕಾಯಗಳು ಡೀನರು, ವಿಭಾಗಗಳ ಮುಖ್ಯಸ್ಥರು, ಸಂಯೋಜಕರುಗಳು, ವಿದ್ಯಾರ್ಥಿಗಳು ಹಾಜರಿದ್ದರು.


