ದೆಹಲಿ ಸ್ಫೋಟ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಖಂಡನೆ

Ravi Talawar
ದೆಹಲಿ ಸ್ಫೋಟ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಖಂಡನೆ
WhatsApp Group Join Now
Telegram Group Join Now
ಬೆಂಗಳೂರು,  ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಸಮೀಪ ನಡೆದ ಸ್ಫೋಟವನ್ನು ಖಂಡಿಸಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು, ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.
ಈ ಕುರಿತು ಸಚಿವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದು, ಸ್ಫೋಟ ಘಟನೆ ತಿಳಿದು ಆಘಾತಕ್ಕೊಳಗಾಗಿದ್ದೇನೆ. ಸ್ಫೋಟದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳು. ಅವರ ಕುಟುಂಬದ ಜೊತೆ ನಾನಿದ್ದೇನೆ. ಗಾಯಗೊಂಡ ಎಲ್ಲರೂ ಶೀಘ್ರವೇ ಚೇತರಿಸಿಕೊಳ್ಳಲಿ. ಈ ದುಷ್ಕೃತ್ಯದ ಹಿಂದೆ ಯಾವುದೇ ಶಕ್ತಿಗಳಿರಲಿ ಅವರನ್ನು ಯಾವ ಮುಲಾಜೂ ಇಲ್ಲದೇ ಮಟ್ಟಹಾಕಬೇಕೆಂದು ಆಗ್ರಹಿಸುತ್ತೇ‌ನೆ. ಎಂದು ಹೇಳಿದ್ದಾರೆ.
WhatsApp Group Join Now
Telegram Group Join Now
Share This Article