ನ.26, 27 ರಂದು ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ

Ravi Talawar
ನ.26, 27 ರಂದು ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ
Oplus_131072
WhatsApp Group Join Now
Telegram Group Join Now

ಬಳ್ಳಾರಿ,ನ.22: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನ.26 ಮತ್ತು 27 ರಂದು ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ನ.26 ರಂದು ಬೆಳಿಗ್ಗೆ 09.30 ಕ್ಕೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

ನ.26 ರಂದು ಬೆಳಿಗ್ಗೆ 10 ಗಂಟೆಗೆ ಬಾಲ ಮತ್ತು ಕಿಶೋರ ಪ್ರತಿಭೆಗಳಿಗೆ ವಿವಿಧ ಸ್ಥಳಗಳಲ್ಲಿ ಸ್ಪರ್ಧೆ ನಡೆಯಲಿದೆ.ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಶಾಸ್ತಿçÃಯ ನೃತ್ಯ(10 ನಿಮಿಷ), ಸುಗಮ ಸಂಗೀತ (7 ನಿಮಿಷ), ಜಾನಪದ ಗೀತೆಗಳು(7 ನಿಮಿಷ).ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮAದಿರದಲ್ಲಿ ಚಿತ್ರಕಲಾ ಸ್ಪರ್ಧೆ (ಸ್ವಕಲ್ಪಿತ)-120 ನಿಮಿಷ.ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ವಾದ್ಯ(7 ನಿಮಿಷ), ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ಸಂಗೀತ(7 ನಿಮಿಷ) ಸ್ಪರ್ಧೆಗಳು ನಡೆಯಲಿವೆ.

ನ.27 ರಂದು ಬೆಳಿಗ್ಗೆ 10 ಗಂಟೆಗೆ ಯುವಪ್ರತಿಭೆ ಮತ್ತು ಸಮೂಹ ಸ್ಪರ್ಧೆಗಳಿಗೆ ವಿವಿಧ ಸ್ಥಳಗಳಲ್ಲಿ ಸ್ಪರ್ಧೆ ನಡೆಯಲಿದೆ.ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಶಾಸ್ತಿçÃಯ ನೃತ್ಯ(10 ನಿಮಿಷ), ಸುಗಮ ಸಂಗೀತ (7 ನಿಮಿಷ), ನಾಟಕ(45 ನಿಮಿಷ).ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮAದಿರದಲ್ಲಿ ಚಿತ್ರಕಲಾ ಸ್ಪರ್ಧೆ (ಸ್ವಕಲ್ಪಿತ)-120 ನಿಮಿಷ.ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ವಾದ್ಯ(7 ನಿಮಿಷ), ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ಸಂಗೀತ(7 ನಿಮಿಷ), ನನ್ನ ಮೆಚ್ಚಿನ ಸಾಹಿತಿ(ಆಶು ಭಾಷಣ)-7 ನಿಮಿಷ ಸ್ಪರ್ಧೆಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ

WhatsApp Group Join Now
Telegram Group Join Now
Share This Article