ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ನೀಡಲು ಆಗ್ರಹಿಸಿ ಬಿಜೆಪಿ ಬೃಹತ್‌ ಹೋರಾಟಕ್ಕೆ ಅಣಿ

Ravi Talawar
ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ನೀಡಲು ಆಗ್ರಹಿಸಿ ಬಿಜೆಪಿ ಬೃಹತ್‌ ಹೋರಾಟಕ್ಕೆ ಅಣಿ
WhatsApp Group Join Now
Telegram Group Join Now

ದಾವಣಗೆರೆ, ನವೆಂಬರ್ 24: ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಹೋರಾಟ ನಡೆಸಿದ ರೈತರ ಕಿಚ್ಚು ತಣ್ಣಗಾಯಿತು ಎನ್ನುವಷ್ಟರಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆ ನೋವು ಆರಂಭವಾಗಿದೆ. ಈಗಾಲೇ ಮೆಕ್ಕೆಜೋಳ ಹಾಗೂ ಭತ್ತಕ್ಕೆ  ಬೆಂಬಲ ನೀಡುವಂತೆ ರೈತ ಸಂಘಗಳು ಹೋರಾಟ ನಡೆಸಿದ್ದು, ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಬಿಜೆಪಿ ತಾಲೂಕು ಮಂಡಲದಿಂದ ಬಂದ್ ಕೂಡ ಮಾಡಲಾಗಿತ್ತು. ಇದೀಗ ಹೋರಾಟದ ಕಿಚ್ಚು ಮತ್ತೋಂದು ಹೆಜ್ಜೆ ಮುಂದು ಹೋಗಿದೆ. ಹೋರಾಟಕ್ಕೆ ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ  ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ಕಬ್ಬು ಹೋರಾಟಗಾರರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಜಯೇಂದ್ರ ಈಗ ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ನೀಡಬೇಕೆಂದು ರಾಜ್ಯ ಸರ್ಕಾರದ ವಿರುದ್ದ ಹೋರಾಟಕ್ಕೆ ಇಳಿಯಲಿದ್ದಾರೆ. ದಾವಣಗೆರೆಯಿಂದ ಆರಂಭಿಸಿ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ.

WhatsApp Group Join Now
Telegram Group Join Now
Share This Article