ಚಿತ್ರದುರ್ಗ, ನವೆಂಬರ್ 26: ಮೊದಲ ಪೋಕ್ಸೋ ಪ್ರಕರಣ ಸಂಬಂಧ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕೇಸ್ನಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದಿರುವ ಕೋರ್ಟ್, ಪೋಕ್ಸೋ ಕೇಸ್ ಖುಲಾಸೆಗೊಳಿಸಿದೆ. 2ನೇ ಆರೋಪಿ ರಶ್ಮಿ, 4ನೇ ಆರೋಪಿ ಪರಮಶಿವಯ್ಯ ಕೂಡ ನಿರ್ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, ಮುರುಘಾಶ್ರೀ ಪರವಾಗಿ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.
2022ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಕೇಸ್ ದಾಖಲಾಗಿತ್ತು. ಮಠದ ಹಾಸ್ಟೆಲ್ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ದೂರು ನೀಡಿದ್ದರು. ಆಗಸ್ಟ್ 27ರಂದು ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು. 2022ರ ಸೆಪ್ಟಂಬರ್ 1ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿಯನ್ನ ಪೊಲೀಸರು ಬಂಧಿಸಿದ್ದರು. ಚಾರ್ಜ್ಶೀಟ್ ವೇಳೆ ಎ3 ಬಸವಾದಿತ್ಯ, ಎ5 ವಕೀಲ ಗಂಗಾಧರಯ್ಯ ಅವರನ್ನು ಕೈಬಿಡಲಾಗಿತ್ತು.


