ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಪ್ಯಾಡ್ ಪೆನ್ನುಗಳು ವಿತರಣೆ
ಬಳ್ಳಾರಿ. ಫೇ. 03 : ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಯಾರಿಗೂ ಕಡಿಮೆಯಲ್ಲ. ದೇಶದಲ್ಲಿ ದೊಡ್ಡ ದೊಡ್ಡ ಸಾಧನೆ ಮಾಡಿದವರೂ ಸಹ ಸರ್ಕಾರಿ ಶಾಲೆಯಲ್ಲಿ ಓದಿದ್ದಾರೆ. ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂದು ಜೆ.ಟಿ.ಫೌಂಡೇಶನ್ ಮುಖ್ಯಸ್ಥ ತಿಮ್ಮಪ್ಪ ಜೋಳದರಾಶಿ
ತಿಳಿಸಿದರು.
ಅವರು ಇಂದು ಬಳ್ಳಾರಿ ತಾಲೂಕಿನ ಚೇಳ್ಳಗುರ್ಕಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜೆ.ಟಿ.ಫೌಂಡೇಶನ್ ಹಾಗೂ ಶ್ರೀ ಲಕ್ಷ್ಮಿ ವೆಂಕಟೇಶ್ವರ ಫಿಲ್ಲಿಂಗ್ ಸ್ಟೇಷನ್ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ಹಾಗೂ ಪೆನ್ನುಗಳನ್ನು ವಿತರಿಸಿ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ ಎಸ್ಸೆಸ್ಸೆಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ಯಾಡ್ ಹಾಗೂ ಪೆನ್ನುಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರೋತ್ಸಾಹ ಉದ್ದೇಶದಿಂದ ಈ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಶಶಿಧರಮೇಟಿ, ಕೆ.ಎಮ್ ಮಂಜುನಾಥ ತಾ.ಪಂ.ಸದಸ್ಯ ರೂಪನಗುಡಿ ಗೋವಿಂದಪ್ಪ, ಎಮ್ ಪಿ ಪ್ರತಾಪ ನಾಯುಡು, ಜೋಳದರಾಶಿ ಮನೋಜ್ , ರೂಪನಗುಡಿ ಗ್ರಾಪ ಅಧ್ಯಕ್ಷ ನಾಗರಾಜ್, ಬಸವ ಬಳ್ಳಾರಿ. ರಾಮಪ್ರಸದ್. ಸುಭಾಷಚಂದ್ರ.ಗೋಪಾಲ ನಾರಾಯಣಸ್ವಾಮಿ ಮಲ್ಲನಗೌಡ. ಹುಲುಗಪ್ಪ ರವಿಸ್ವಾಮಿ , ಶಾಲೆಯ ಮುಖ್ಯಗುರುಗಳು ಶಾಲಾ ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು.


