ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಖಡಕ್ ಸೂಚನೆ ಅರ್ಹತೆ ಮಾನದಂಡಗಳಡಿ ಸಾಲ-ಸೌಲಭ್ಯ ವಿತರಿಸಿ

A B
By A B
ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಖಡಕ್ ಸೂಚನೆ ಅರ್ಹತೆ ಮಾನದಂಡಗಳಡಿ ಸಾಲ-ಸೌಲಭ್ಯ ವಿತರಿಸಿ
WhatsApp Group Join Now
Telegram Group Join Now

ಬಳ್ಳಾರಿ,ಮಾ.1,1
ಸಾರ್ವಜನಿಕರಿಗೆ ಅರ್ಹತೆ ಮಾನದಂಡಗಳಡಿ ಸಾಲ-ಸೌಲಭ್ಯ ನೀಡಬೇಕು. ಬ್ಯಾಂಕ್ ಸೌಲಭ್ಯ ನೀಡುವಲ್ಲಿ ವಿಳಂಬವಾದಲ್ಲಿ ಆಯಾ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಎಲ್ಲಾ ಬ್ಯಾಂಕ್ ವ್ಯವಸ್ಥಾಪಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಸೌಲಭ್ಯ ಪಡೆಯುವಲ್ಲಿ ಬಳ್ಳಾರಿ ಜಿಲ್ಲೆ ಕಡಿಮೆ ಪ್ರಗತಿ ಸಾಧಿಸಿದೆ. ರಾಜ್ಯದ ಇತರೆ ಜಿಲ್ಲೆಗಳು ಹೆಚ್ಚು ಹೆಚ್ಚು ಪ್ರಗತಿ ಸಾಧಿಸುವಲ್ಲಿ ಯಶಸ್ವಿಯಾಗಿವೆ. ಮುಂಬರುವ ದಿನಗಳಲ್ಲಿ ಬಳ್ಳಾರಿ ಜಿಲ್ಲಿಯೂ ಪ್ರಗತಿ ಸಾಧಿಸುವಲ್ಲಿ ಬ್ಯಾಂಕ್ ಗಳ ಸಹಕಾರ ಅತಿ ಅಗತ್ಯವಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟಿçÃಯ ಜೀವನೋಪಾಯ ಅಭಿಯಾನವನ್ನು ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಸ್ವ- ಸಹಾಯ ಗುಂಪುಗಳ ಸಾಲ ಸಂಪರ್ಕ ಮತ್ತು ಸ್ವ ಸಹಾಯ ಗುಂಪುಗಳ ಸದಸ್ಯರುಗಳ ವೈಯಕ್ತಿಕ ಉದ್ಯಮ ಹಣಕಾಸು ಮತ್ತು ಇತರೆ ಹಣಕಾಸು ಸೇರ್ಪಡೆಗೆ ಸಂಬAಧಪಟ್ಟ ಯೋಜನೆಗಳ ಅನುಷ್ಠಾನಕ್ಕೆ ಸಾಲ-ಸೌಲಭ್ಯ ಅತ್ಯಾವಶ್ಯಕವಾಗಿದೆ ಎಂದು ಅವರು ಹೇಳಿದರು.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯ ನಿವೃತ್ತ ಡಿಜಿಎಂ ಹಾಗೂ ಹೈದರಾಬಾದ್ ಎನ್.ಐ.ಆರ್.ಡಿ.ಪಿ.ಆರ್ ರಾಷ್ಟç ಸಂಪನ್ಮೂಲ ವ್ಯಕ್ತಿ ಕೊಟಗೇರಿ ಶ್ರೀನಿವಾಸ್ ರಾವ್ ಅವರು ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಉಳಿತಾಯ ಖಾತೆ, ವೈಯಕ್ತಿಕ ಸಾಲ ಮತ್ತು ಗುಂಪು ಸಾಲದ ಕುರಿತು ಬ್ಯಾಂಕ್ ವ್ಯವಸ್ಥಾಪಕರಿಗೆ ಸವಿವರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ನಬಾರ್ಡ್ ನ ಡಿಡಿಎಂ ಯುವರಾಜ್, ಕೆನರಾ ಬ್ಯಾಂಕ್ ನ ಎಲ್‌ಡಿಎಂ ಗಿರೀಶ್ ಕುಲಕರ್ಣಿ ಸೇರಿದಂತೆ ಎನ್.ಆರ್.ಎಲ್.ಎಂ ಯೋಜನೆಯ ಸಿಬ್ಬಂದಿಗಳು, 180 ಕ್ಕೂ ಹೆಚ್ಚು ಬ್ಯಾಂಕ್ ವ್ಯವಸ್ಥಾಪಕರು, 80 ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸಂಪನ್ಮೂಲ ವ್ಯಕ್ತಿಗಳು ಹಾಗೂ ಇತರರು ಹಾಜರಿದ್ದರು.

WhatsApp Group Join Now
Telegram Group Join Now
Share This Article