ಬಳ್ಳಾರಿ,ಮಾ.14:: ತಾಲ್ಲೂಕಿನ ಹಿರೇಹಡ್ಲಿಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್ ಭೇಟಿನೀಡಿ, ದುರಸ್ತಿ ಕೊಠಡಿಗಳನ್ನು ಪರಿಶೀಲನೆ ಮಾಡಿದರು.
ನಂತರ ಸಿಇಓ ಮಹಮ್ಮದ್ ಹ್ಯಾರಿಸ್ ಸುಮೇರ್ ಮಾತನಾಡಿದ ಅವರು, ಶೈಕ್ಷಣಿಕ ಪ್ರಗತಿಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಭರವಸೆಯನ್ನು ನೀಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ತರಗತಿವಾರು ವೀಕ್ಷಿಸಿ, ಮಕ್ಕಳ ಸ್ನೇಹಮಯಿಗಳಾಗಿ ಪರಿಶೀಲನೆ ಮಾಡಿ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳ ಕಲಿಕಾ ಪ್ರಗತಿ ಆಗುವಂತೆ ಜಾಗೃತಿ ಮೂಡಿಸಿ ಅವರನ್ನು ವಿದ್ಯಾವಂತರನ್ನಾಗಿ ಮಾಡಲು ದೇಶದ ಶೈಕ್ಷಣಿಕ ಪ್ರಗತಿ ಹೆಚ್ಚಿಸಲು ಶಿಕ್ಷಕರು ಸದಾ ಹಸನ್ಮುಖಿಗಳಾಗಿ ಶ್ರಮ ವಹಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ತಿಪ್ಪೇಸ್ವಾಮಿ.ಎಂ, ಸಹಶಿಕ್ಷಕರಾದ ರವಿನಾಯ್ಕ, ಸಹ ಸಿಬ್ಬಂದಿ ವರ್ಗದವರು, ಎಸ್ಡಿಎಂಸಿ ಅಧ್ಯಕ್ಷ ಸಣ್ಣ ಗಾದಿಲಿಂಗಪ್ಪ, ಉಪಾಧ್ಯಕ್ಷ ಸದಾಕಲಿ, ಸದಸ್ಯರಾದ ಮಲ್ಲಿಕಾರ್ಜುನ, ಅಭಿಯಂತರರು ಹರೀಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹಮ್ಮದ್ ಸೇರಿದಂತೆ ಮತ್ತಿತರರು ಇದ್ದರು.


