ಬಳ್ಳಾರಿ. ಏ. 03.: ನಗರದ ಕಾಳಮ್ಮ ಬೀದಿಯಲ್ಲಿ ಇರುವ ಶ್ರೀ ಕಾಳಿಕಾ ಕಮಟೇಶ್ವರ ಸ್ವಾಮಿ ರಥೋತ್ಸವ ಭಕ್ತಿ ಭಾವದಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು ಎಂದು ಕಾಳಿಕಾ ಕಮಟೇಶ್ವರ ದೇವಸ್ಥಾನ ಸಮಿತಿಯ ಕಾರ್ಯದರ್ಶಿ ವೆಂಕಟೇಶ್ ತಿಳಿಸಿದರು.
ಇಂದು ಮುಂಜಾನೆ ದೇವಸ್ಥಾನದಲ್ಲಿ ಕಮಟೇಶ್ವರ ಸ್ವಾಮಿಗೆ ವಿವಿಧ ಪೂಜಾ ವಿಧಾನಗಳನ್ನು ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಜರುಗಿಸಲಾಯಿತು. ಭಕ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದು, ದೇವಾಲಯದ ವಾತಾವರಣ ಭಕ್ತಿ ಮಯವಾಗಿದ್ದು ಕಂಡು ಬಂತು.
ನಂತರ ಸಂಜೆ ಐದು ಗಂಟೆಗೆ ಶ್ರದ್ದೆ ಭಕ್ತಿ ಭಾವದಿಂದ ರಥೋತ್ಸವನ್ನು ಸಾವಿರಾರು ಭಕ್ತರ ಸಮ್ಮುಖದಲ್ಲಿ ತೇರನ್ನು ಎಳೆಯಲಾಯಿತು.
ರಥೋತ್ಸವದಲ್ಲಿ ಭಾಗವಹಿಸಲು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿ ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತೇರನ್ನು ಹೇಳಿದು ಸ್ವಾಮಿಯ ಕೃಪೆಗೆ ಪಾತ್ರರಾಗಿ ಪುನೀತರಾದರು.
ರಥೋತ್ಸವದ ವೇಳೆ ಶಾಂತಿ ಮತ್ತು ಭದ್ರತೆ ಕಾಪಾಡಲು ಅಗತ್ಯ ವ್ಯವಸ್ಥೆಗಳನ್ನು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿದ್ದವು. ರಥವನ್ನು ಸಾಂಪ್ರದಾಯಿಕವಾಗಿ ಬೀದಿಗಳಲ್ಲಿ ಎಳೆದು ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು.


