ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಅನುದಾನ ಬಳಕೆಯಾಗಲಿ : ರಾಹುಲ್ ಶಿಂಧೆ

Pratibha Boi
ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಅನುದಾನ ಬಳಕೆಯಾಗಲಿ : ರಾಹುಲ್ ಶಿಂಧೆ
WhatsApp Group Join Now
Telegram Group Join Now
“ಕಾಯಕ ಗ್ರಾಮ” ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ: ಉಗಾರ ಗ್ರಾಮ ಪಂಚಾಯತಿ 2025-ನೇ ಸಾಲಿನಲ್ಲಿ ಶೇ 100 ಕರ ವಸೂಲಾತಿ ಮಾಡಿದ್ದು, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಅನುದಾನ ಬಳಕೆಯಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.
ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬಿಕೆ ಗ್ರಾಮದ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಗ್ರಾಮ ಪಂಚಾಯತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಕಾಯಕ ಗ್ರಾಮ” ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರು, ಗ್ರಂಥಾಲಯ, ಅಂಗನವಾಡಿ, ಕೂಸಿನ ಮನೆ ಕೇಂದ್ರ ಅಚ್ಚುಕಟ್ಟಾಗಿ ಕಾರ್ಯನಿರ್ವಾಹಿಸುತಿದ್ದು ಇನ್ನಷ್ಟು ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದು “ಕಾಯಕ ಗ್ರಾಮ” ಕಾರ್ಯಕ್ರಮದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಆಯ್ಕೆ ಮಾಡಲಾಗಿರುವ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ, ಗ್ರಾಮಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಒಂದೇ ಆವರಣದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆ ಇದ್ದು, ಶಿಕ್ಷಕರ ಕೊರತೆಯಿದೆ ಎರಡು ಶಾಲೆ ಮರ್ಜ್ ಮಾಡಲು ಮಕ್ಕಳ ಬೇಡಿಕೆಯಿದೆ ಮುಂದಿನ ದಿನ ಎಲ್ಲ ಮಕ್ಕಳ ಒಂದೇ ಸೂರಿನಡಿ ಕಲಿಕೆಗೆ ಅವಕಾಶ ಮಾಡಲಾಗುವುದು ಎಂದು ತಿಳಿಸಿದರು.
ಶಾಲಾ ಮಕ್ಕಳೊಂದಿಗೆ ಸಂವಾದ :
ಇಲ್ಲಿನ ಶಾಸಕರ ಮಾದರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಗೆ ಭೇಟಿ ನೀಡಿದ ಮನ್ಯರು ಮಕ್ಕಳೊಂದಿಗೆ ಸಂವಾದ ನಡೆಸಿದರು. ಸ್ಮಾರ್ಟ್ ತರಗತಿ ಹಾಗೂ 7 ತರಗತಿ ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆಗಳ ಪರಿಶೀಲಿಸಿದರು. ಇದೇ ವೇಳೆ ಗಣಿತ ಲೆಕ್ಕ ಬಿಡಿಸಿದ ಮಕ್ಕಳಿಗೆ ಗುಲಾಬಿ ಹೂವು ನೀಡಿ ಅಭಿನಂದಿಸಿದರು.
ಕೂಸಿನ ಮನೆಗೆ ಭೇಟಿ:
ಬಳಿಕ ಶಾಲಾ ಆವರಣದಲ್ಲಿರುವ ನರೇಗಾ ಯೋಜನಯ ಕೂಸಿನ ಮನೆ ಕೇಂದ್ರಕ್ಕೆ ಭೇಟಿ ನೀಡಿ ಆರೈಕೆದಾರರಿಗೆ ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು.
ಎನ್ ಆರ್ ಎಲ್ ಎಂ ಸಂಜೀವಿನಿ ಒಕ್ಕೂಟದ ಕಚೇರಿ ವೀಕ್ಷಣೆ ಹಾಗೂ ಮಹಿಳೆಯರು ತಯಾರಿಸಿದ ಆಹಾರ. ಪದಾರ್ಥ, ಕರ ಕುಶಾಲ ವಸ್ತು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸನ್ಮಾನ :
2025-26 ನೇ ಸಾಲಿನಲ್ಲಿ ಕಾಗವಾಡ ತಾಲೂಕಿನ 8 ಗ್ರಾಮ ಪಂಚಾಯತ ವ್ಯಾಪ್ತಿ ಶೇ 100 ಕರ ವಸೂಲಾತಿ ಮಾಡಿ ಜಿಲ್ಲೆಗೆ ಪ್ರತಮ ಸ್ಥಾನ ಪಡೆದ ತಾಲೂಕಿನ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಮ್ಯಾನರು ಸನ್ಮಾನ ಮಾಡಿದರು.
ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು ಹಾಗೂ ಅಗತ್ಯ ಯೋಜನೆ ರೂಪಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ಶ್ರೀ ರವಿ ಬಂಗಾರೆಪ್ಪನವರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ವೀರಣ್ಣ ವಾಲಿ, ಅಥಣಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಶಿವಾನಂದ ಕಲ್ಲಾಪುರ, ಸಹಾಯಕ ನಿರ್ದೇಶಕರಾದ ಶ್ರೀ ಎ ಡಿ. ಅನ್ಸಾರಿ, ಶ್ರೀ ಶಿವಾನಂದ ಸನಾಳ, ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗಪ್ಪ ಕಾಂಬಳೆ ವಿವಿಧ ಇಲಾಖೆಯ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
WhatsApp Group Join Now
Telegram Group Join Now
Share This Article