ಬಳ್ಳಾರಿ, ಏ.10.ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿಯವರು ಗುರುವಾರ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ (ಎಐಸಿಸಿ)ಯ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆಯವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಈ ಸಂದರ್ಭ ಎಐಸಿಸಿ ಅಧ್ಯಕ್ಷರೊಂದಿಗೆ ಔಪಚಾರಿಕ ಮಾತುಕತೆಯ ಜೊತೆಗೆ ಬಳ್ಳಾರಿ ನಗರದ ಅಭಿವೃದ್ಧಿಗೆ ಸಂಬಂಧಿಸಿ ವರದಿ ನೀಡಿದರು. ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಿದರು.
ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಈ ವೇಳೆ ತಮಗೆ ಹಲವು ಸೂಚನೆಗಳನ್ನು ನೀಡಿ, ಮಾರ್ಗದರ್ಶನ ಮಾಡಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.


