ಕೃಷಿ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಬಸವರಾಜ ಮಾತನವರ ಅವಿರೋಧ ಆಯ್ಕೆ

Pratibha Boi
ಕೃಷಿ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಬಸವರಾಜ ಮಾತನವರ ಅವಿರೋಧ ಆಯ್ಕೆ
WhatsApp Group Join Now
Telegram Group Join Now

ಚ,ಕಿತ್ತೂರು: ಸ್ಥಳೀಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಗುರುವಾರ ಯಶಸ್ವಿಯಾಗಿ ಜರುಗಿತು. ಮುಂದಿನ ಐದು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ಬಸವರಾಜ ಎಸ್. ಮಾತನವರ ಹಾಗೂ ಉಪಾಧ್ಯಕ್ಷರಾಗಿ ಸುರೇಶ ಚಂದ್ರಪ್ಪ ಜಾಂಗಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಸಿ. ಆರ್. ಪಾಟೀಲ ಅವರ ಮಾರ್ಗದರ್ಶನದಲ್ಲಿ ಈ ಪ್ರಕ್ರಿಯೆಯು ಶಾಂತಿಯುತವಾಗಿ ನಡೆಯಿತು.
ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರು ಒಮ್ಮತದಿಂದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುವುದು ಈ ಬಾರಿಯ ಚುನಾವಣೆಯ ವಿಶೇಷವಾಗಿತ್ತು.
ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರಾಗಿ,ಬಸಪ್ಪ, ಎಸ್,ಹುನಶ್ಯಾಳ.ಜೈಯದೇವ, ಮಾರಿಹಾಳ.ಬಸವರಾಜ, ಕ. ಕುಗಟಿ.ಮಂಜುನಾಥ, ಬ, ಭೀಮರಾಣಿ.ಶಂಕರ, ಪರವಣ್ಣವರ.ನಿಜಗುಣಿ, ಬಂಗಿ.ರಮೇಶ, ಸಕ್ರೆನ್ನವರ.ಭೀಮಸಿ, ಮುತ್ತೆನವರ.ರುದ್ರಪ್ಪ, ಎಸ್, ದೇಗಲೋಳ್ಳಿ.ಯಶೋದಾ, ಎನ್, ಜವಳಿ.ವಿಜಯಲಕ್ಷ್ಮಿ, ಎಸ್, ಅಕ್ಕಿ.ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಪ್ರಮುಖರಾದ ಬಸವರಾಜ ಹಡಪದ, ಈರಣ್ಣ ಹೈಬತ್ತಿ ಸೇರಿದಂತೆ ಸಹಕಾರಿ ಕ್ಷೇತ್ರದ ಗಣ್ಯರು ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಆಯ್ಕೆಯಾದ ನೂತನ ಪದಾಧಿಕಾರಿಗಳು ಮಾತನಾಡಿ, “ರೈತರಿಗೆ ಮತ್ತು ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ಬ್ಯಾಂಕಿನ ಸೌಲಭ್ಯಗಳನ್ನು ತಲುಪಿಸಲು ಹಾಗೂ ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ,” ಎಂದು ಭರವಸೆ ನೀಡಿದರು. ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಹಾಗೂ ನಿರ್ದೇಶಕರಿಗೆ ಬ್ಯಾಂಕಿನ ಅಭಿಮಾನಿಗಳು ಮತ್ತು ರೈತ ಬಾಂಧವರು ಅಭಿನಂದಿಸಿದ್ದಾರೆ.

WhatsApp Group Join Now
Telegram Group Join Now
Share This Article