ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ: ಸಂತ್ರಸ್ತೆ ಪತಿಯಿಂದ ಪ್ರಜ್ವಲ್​ ವಿರುದ್ಧ ಸಿಐಡಿಗೆ ದೂರು!

Ravi Talawar
ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ: ಸಂತ್ರಸ್ತೆ ಪತಿಯಿಂದ ಪ್ರಜ್ವಲ್​ ವಿರುದ್ಧ ಸಿಐಡಿಗೆ ದೂರು!
WhatsApp Group Join Now
Telegram Group Join Now

ಬೆಂಗಳೂರು, ಮೇ 03: ರಾಜ್ಯಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ ಹಲ್ ಚಲ್ ಎಬ್ಬಿಸಿದ್ದು ಇದೀಗ ಸಿಐಡಿಗೂ ದೂರು ದಾಖಲಾಗಿದೆ. ಪ್ರಜ್ವಲ್ ರೇವಣ್ಣರಿಂದ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದ ಮಹಿಳೆಯ ಪತಿ ಇದೀಗ ಅಪರಾಧ ತನಿಖಾ ಇಲಾಖೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಎ1 ಆಗಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಎಂ ಹಾಸ್ಟೇಲ್​ ಸೀಟ್​ ಕೊಡಿಸಿ ಅಂತ 2021ರಲ್ಲಿ ಸಂತ್ರಸ್ತೆ ಪ್ರಜ್ವಲ್​ ರೇವಣ್ಣ ಅವರನ್ನು ಎಂಪಿ ಕ್ವಾಟರ್ಸ್​ನಲ್ಲಿ ಭೇಟಿಯಾಗಲು ತೆರಳಿದ್ದರು. ಈ ವೇಳೆ ಸಂಸದ ಪ್ರಜ್ವಲ್​ ರೇವಣ್ಣ ಮಹಿಳೆಯನ್ನು ಕ್ವಾಟರ್ಸ್​ನ ಮಹಡಿ ಮೇಲೆ ಕಳುಹಿಸಿದ್ದಾರೆ. ಬಳಿಕ ಪ್ರಜ್ವಲ್​ ರೇವಣ್ಣ ತಮ್ಮ ಬಳಿ ಸಮಸ್ಯೆ ಹೇಳಿಕೊಂಡು ಬಂದಿದ್ದ ಸಾರ್ವಜನಿಕರನ್ನು ಮಾತನಾಡಿಸಿ ಕಳುಹಿಸಿದ್ದಾರೆ. ಕೊನೆಗೆ ಸಂತ್ರಸ್ತೆ ಮಹಿಳೆ ಭೇಟಿಯಾಗಲು ಮಹಡಿ ಮೇಲೆ ಹೋಗಿದ್ದಾರೆ. ಅಲ್ಲಿ ಪ್ರಜ್ವಲ್​ ರೇವಣ್ಣ ಮಹಿಳೆಯನ್ನು ಕೊಠಡಿಯೊಂದರ ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅಲ್ಲದೆ ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.

ಬಳಿಕ ಈ ವಿಡಿಯೋವನ್ನು ಇಟ್ಟುಕೊಂಡು ಮಹಿಳೆಗೆ ಬ್ಲಾಕ್​ ಮೇಲ್​ ಮಾಡಿದ್ದಾರೆ. ಅಲ್ಲದೆ ಮಹಿಳೆಗೆ ಪದೇ ಪದೇ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ಪತಿ ದೂರಿನಲ್ಲಿ ದಾಖಲಿಸಿದ್ದಾರೆ.

ತಮ್ಮ ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹೆಚ್​​.ಡಿ ರೇವಣ್ಣ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಇದರ ಬೆನ್ನಲ್ಲೇ ಹಾಸನ ಮೂಲದ ಮಹಿಳೆ ಪ್ರಜ್ವಲ್​ ರೇವಣ್ಣ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಎಸ್​ಐಟಿಗೆ ಹೇಳಿಕೆ ನೀಡಿದ್ದರು. ಎಸ್​ಐಟಿ ಹೇಳಿಕೆ ಆಧರಿಸಿ ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್​​ ದಾಖಲಿಸಿಕೊಂಡಿದ್ದೆ.ಇದರ ಬೆನ್ನಲೇ ಇದೀಗ ಸಂತ್ರಸ್ತೆ ಪತಿ ಸಿಐಡಿಗೆ ದೂರು ನೀಡಿದ್ದು, ಪ್ರಜ್ವಲ್​ ರೇವಣ್ಣಗೆ ಸಂಕಷ್ಟ ಜಾಸ್ತಿಯಾಗಿದೆ.

ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್​ಐಟಿ ನೋಟಿಸ್​ ನೀಡಿದೆ. ಆದರೆ ಎಸ್​ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್​ ರೇವಣ್ಣಗೆ ಮತ್ತಷ್ಟು ತೆಲೆನೋವಾಗಿದೆ.

ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರವೇ ತಿಳಿಸಿದ್ದಾರೆ. ಈ ಮಧ್ಯೆ, ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಅವರನ್ನು ಕರೆತಂದು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article