ಕಳಂಕಿತ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ಎಂದ ಜನತಾ ಪಕ್ಷ!

Ravi Talawar
ಕಳಂಕಿತ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ಎಂದ ಜನತಾ ಪಕ್ಷ!
WhatsApp Group Join Now
Telegram Group Join Now

ಬೆಂಗಳೂರು,11: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಏಪ್ರಿಲ್ ​26ರಂದು ಮುಗಿಯುತ್ತಿದ್ದಂತೆ ಅಶ್ಲೀಲ ವಿಡಿಯೋಗಳ ಕಳಂಕಿತ ವ್ಯಕ್ತಿ  ವಿದೇಶಕ್ಕೆ ಪರಾರಿಯಾದರು.

ಅವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ! ಅದಾದ ನಂತರ ಪ್ರಕರಣದ ಬೆನ್ನುಹತ್ತಿದ ಎಸ್​ಐಟಿ ಪೊಲೀಸರಿಗೆ ಇದುವರೆಗೂ ಅವರನ್ನು ಪತ್ತೆ ಹಚ್ಚಿ, ಬಂಧಿಸಲು ಸಾಧ್ಯವಾಗಿಲ್ಲ. ಈ ಮಧ್ಯೆ, ಜನತಾ ಪಕ್ಷದ ವತಿಯಿಂದ ಆರೋಪಿಯ ಬಗ್ಗೆ ಪೋಸ್ಟರ್ ಹಚ್ಚುವ/ಹಂಚುವ ಕೆಲಸ ನಡೆದಿದೆ.

ಪ್ರಜ್ವಲ್ ಹುಡುಕುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಪ್ರಕರಣದ ಎರಡನೆಯ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಪ್ರಕಟಿಸಿದೆ. ಬೆಂಗಳೂರಿನ ಶಿವಾನಂದ ಸರ್ಕಲ್​ನಲ್ಲಿ

ಜನತಾ ಪಕ್ಷದ ನಾಗೇಶ್ ಎಂಬಾತ ಪೋಸ್ಟರ್  ಅಂಟಿಸಿ, ಮಾಧ್ಯಮಗಳ ಜೊತೆ ಮಾತನಾಡುತ್ತದ್ದಾಗಲೇ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article