ಪರಿಷತ್ ಚುನಾವಣೆಯಲ್ಲಿ ದಳ- ಕಮಲ ಮೈತ್ರಿ ಮುಂದುವರಿಕೆ: ಪ್ರಜ್ವಲ್ ಕೇಸ್ ‘ಕೈ’ಗೆ ಬ್ರಹ್ಮಾಸ್ತ್ರ!

Ravi Talawar
ಪರಿಷತ್ ಚುನಾವಣೆಯಲ್ಲಿ ದಳ- ಕಮಲ ಮೈತ್ರಿ ಮುಂದುವರಿಕೆ: ಪ್ರಜ್ವಲ್ ಕೇಸ್ ‘ಕೈ’ಗೆ ಬ್ರಹ್ಮಾಸ್ತ್ರ!
WhatsApp Group Join Now
Telegram Group Join Now

ತುಮಕೂರು: ಜೂನ್ 3 ರಂದು ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಸಲು ನಿರ್ಧರಿಸಿದ್ದು, ಈ ನಡುವಲ್ಲೇ ಆಡಳಿತಾರೂಢ ಕಾಂಗ್ರೆಸ್ ದೋಸ್ತಿಗಳ ವಿರುದ್ಧ ಪ್ರಜ್ವಲ್ ಪ್ರಕರಣವನ್ನೇ ಅಸ್ತ್ರವಾಗಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಅದರ ಸುಳಿವವನ್ನು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ನೀಡಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಪೆನ್ ಡ್ರೈವ್ ಕೇಸ್ ಹಿಡಿದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ಲೇವಡಿ ಮಾಡಿದರು.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಈಗಾಗಲೇ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಪ್ರಬುದ್ಧ ಶಿಕ್ಷಕ ಮತದಾರರು ಉತ್ತರ ಕೊಟ್ಟಿದ್ದಾರೆ. ಇನ್ನುಳಿದ ಕ್ಷೇತ್ರಗಳಲ್ಲಿ ಪ್ರಜ್ವಲ್ ಪೋಟೋ ಹಾಕಿಕೊಂಡು ಕ್ಯಾಂಪೇನ್ ಮಾಡಲಿ, ನಮಗೇನು ಅಭ್ಯಂತರ ಇಲ್ಲ. ನಾವು ಚುನಾವಣೆಯನ್ನ ಫೇಸ್ ಮಾಡುತ್ತೇವೆ ಎಂದು ಹೇಳಿದರು.

ರಮೇಶ್ ಬಾಬು ಜೆಡಿಎಸ್‌ನಿಂದ ಬಂದವರು ಎಂಬ ಆರೋಪ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಮ್ಮ ಮಾಹಿತಿ ತಪ್ಪು. ಹಾಗೆ ನೋಡಿದರೆ ದೇವೇಗೌಡರು ಸಹ ಕಾಂಗ್ರೆಸ್‌ ಪಾರ್ಟಿಯಿಂದ ಬಂದವರು. ಈ ದೇಶದಲ್ಲಿ ಎಲ್ಲ ಪಾರ್ಟಿಗಳಿಗೆ ಮೂಲ, ಮಾತೃ ಪಾರ್ಟಿ ಕಾಂಗ್ರೆಸ್ ಪಕ್ಷವೇ ಆಗಿದೆ. ಹಾಗಾಗಿ ದೇವೇಗೌಡರು ಸಹ ಕಾಂಗ್ರೆಸ್ ಪಾರ್ಟಿಯಿಂದ ಬಂದವರಾಗಿದ್ದಾರೆ ಎಂದರು.

WhatsApp Group Join Now
Telegram Group Join Now
Share This Article