ವ್ಯಕ್ತಿ ಕಾಣೆ

Ravi Talawar
ವ್ಯಕ್ತಿ ಕಾಣೆ
WhatsApp Group Join Now
Telegram Group Join Now

ಬಳ್ಳಾರಿ,ಮೇ 14: ಸಿರುಗುಪ್ಪ ತಾಲ್ಲೂಕಿನ ಶಾನವಾಸಪುರ ಗ್ರಾಮದ ಹೊಸೂರು ಕಾಲೋನಿಯ ನಿವಾಸಿ ಎ.ಮಲ್ಲಿಕಾರ್ಜುನ ಎನ್ನುವ 34 ವರ್ಷದ ವ್ಯಕ್ತಿ 2023ರ ಅ.16 ರಂದು ಕಾಣೆಯಾಗಿರುವ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್‍ಇನ್ಸ್‍ಪೆಕ್ಟರ್ ಅವರು ಮನವಿ ಮಾಡಿದ್ದಾರೆ.

ವ್ಯಕ್ತಿಯ ಚಹರೆ: ಎತ್ತರ 5.6 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ನೀಲಿ ಬಣ್ಣದ ಲುಂಗಿ ಮತ್ತು ತಿಳಿ ಹಸಿರು ಬಣ್ಣದ ತುಂಬು ತೋಳಿನ ಅಂಗಿ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ.

ಕಾಣೆಯಾದ ವ್ಯಕ್ತಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಿರಿಗೇರಿ ಪೊಲೀಸ್ ಠಾಣೆಯ ದೂ.08396-244426, ಮೊ.9480803056 ಹಾಗೂ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article