ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಭೂಗತ ಪಾತಕಿ ಪ್ಲ್ಯಾನ್

Ravi Talawar
ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಭೂಗತ ಪಾತಕಿ ಪ್ಲ್ಯಾನ್
WhatsApp Group Join Now
Telegram Group Join Now

ಮುಂಬೈ,15: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡು ಹಾರಿಸಿದ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ತೀವ್ರ ವಿಚಾರಣೆಗೂ ಒಳಪಡಿಸಿದ್ದಾರೆ.

ಈ ವಿಚಾರಣೆಯಲ್ಲಿ ಭಯಬೀಳಿಸುವಂತ ಪಾತಕಿಯೊಬ್ಬನ ಹೆಸರು ಕೇಳಿ ಬಂದಿದೆ. ಸಲ್ಮಾನ್ ಹತ್ಯೆಗೆ ನಟೋರಿಸ್ ರೋಹಿತ್ ಗೊದಾರ ಸಂಚು ಹಾಕಿದ್ದ ಅನ್ನುವ ಅಂಶ ಬೆಳಕಿಗೆ ಬಂದಿದೆ.

ಮೊನ್ನೆಯಷ್ಟೇ ಮುಂಬೈ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದರು. ಬಂಧನಕ್ಕೆ ಒಳಗಾದ 6ನೇ ಆರೋಪಿ ಇವನಾಗಿದ್ದಾನೆ. ಬಂಧಿತ ಆರೋಪಿಯನ್ನ ಹರ್ಪಾಲ್ ಎಂದು ಗುರುತಿಸಲಾಗಿದೆ. ಮೊನ್ನೆಯಷ್ಟೇ ಮೊಹಮ್ಮದ್ ರಫೀಕ್ ಚೌಧರಿ ಹೆಸರಿನ 5ನೇ ಆರೋಪಿಯನ್ನು ರಾಜಸ್ಥಾನದ ನಾಗೌರ್ ನಲ್ಲಿ ಬಂಧಿಸಿದ್ದರು ಪೊಲೀಸರು.

ಸಲ್ಮಾನ್ ಖಾನ್  ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್  ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಜ್ ಕುಟುಂಬ ಮುಂಬೈ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ತಮ್ಮ ಮಗನು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ಅವರು ಮಗನನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಣೆಯಲ್ಲಿನ ಸಿಸಿಟಿವಿ ವಿಡಿಯೋವನ್ನು ಒಪ್ಪಿಸುವಂತೆ ಮತ್ತು ಹೊಸದಾಗಿ ಮರಣೋತ್ತರ ಪರೀಕ್ಷೆಯನ್ನು ಮಾಡಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಥಾಪನ್ ಠಾಣೆಯ ಪೊಲೀಸರ ಹಿಂಸೆಯಿಂದಾಗಿ ತಾವು ಮಗನನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ ಪೋಷಕರು.

 

WhatsApp Group Join Now
Telegram Group Join Now
Share This Article