ರಾಜ್ಯ ಬೆಚ್ಚಿ ಬೀಳಿಸಿದ ’ಅಂಜಲಿ ಹತ್ಯೆ’ ಕೇಸ್‌ನಲ್ಲಿ ಇಬ್ಬರು ಪೊಲೀಸರು ಸಸ್ಪೆಂಡ್

Ravi Talawar
ರಾಜ್ಯ ಬೆಚ್ಚಿ ಬೀಳಿಸಿದ ’ಅಂಜಲಿ ಹತ್ಯೆ’ ಕೇಸ್‌ನಲ್ಲಿ ಇಬ್ಬರು ಪೊಲೀಸರು ಸಸ್ಪೆಂಡ್
WhatsApp Group Join Now
Telegram Group Join Now

ಹುಬ್ಬಳ್ಳಿ,16: ಬುಧವಾರ ಬೆಳಗ್ಗೆ ನಡೆದ ಯುವತಿ ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್​ ಹಾಗೂ ಮಹಿಳಾ ಹೆಡ್​ ಕಾನ್ಸ್‌ಟೇಬಲ್ ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಕಮಿಷನರ್​ ರೇಣುಕಾ ಸುಕುಮಾರ್​ ಆದೇಶಿಸಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ ಹಾಗೂ ಹೆಡ್​ ಕಾನ್ಸ್​ಟೇಬಲ್ ರೇಖಾ ಹಾವರಡ್ಡಿ ಅಮಾನತಾದ ಸಿಬ್ಬಂದಿ.

ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ವಿಶ್ವನಾಥ ಎಂಬಾತ ಆಕೆಯ ಮನೆಗೆ ನುಗ್ಗಿ ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬಸ್ಥರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, “ಅಂಜಲಿಯನ್ನು ವಿಶ್ವನಾಥ ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ಒಪ್ಪದೇ ಇದ್ದಾಗ ನೇಹಾ ಹಿರೇಮಠಗೆ ಆದ ಹಾಗೆಯೇ ನಿನಗೂ ಆಗಲಿದೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ಭಯಗೊಂಡಿದ್ದ ನಾವು ಈ ಬಗ್ಗೆ ತಿಳಿಸಲು ಬೆಂಡಿಗೇರಿ ಪೊಲೀಸ್​ ಠಾಣೆಗೆ ಹೋಗಿದ್ದೆವು. ಆ ಸಂದರ್ಭದಲ್ಲಿ ಪೊಲೀಸರು “ಇವೆಲ್ಲಾ ಮೂಢನಂಬಿಕೆ” ಎಂದು ಹೇಳಿ ಘಟನೆಯನ್ನು ನಿರ್ಲರ್ಕ್ಷಿಸಿದ್ದರು. ಅಂದೇ ಆರೋಪಿಯ ಮೇಲೆ ಕಠಿಣ ಕ್ರಮ ತೆಗೆದುಕೊಂಡು, ಪ್ರಕರಣ ದಾಖಲಿಸುತ್ತಿದ್ದರೆ ಹತ್ಯೆ ತಪ್ಪಿಸಬಹುದಿತ್ತು” ಎಂದು ಆರೋಪಿಸಿದ್ದಾರೆ.

ಈ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಪೊಲೀಸ್​ ಠಾಣೆಯಲ್ಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಇನ್ಸ್ಪೆಕ್ಟರ್ ಮತ್ತು ಹೆಡ್​ ಕಾನ್ಸ್​ಟೇಬಲ್ ಕರ್ತವ್ಯ ಲೋಪ ತೋರಿರುವುದು ಕಂಡುಬಂದಿದೆ. ಹೀಗಾಗಿ ಪೊಲೀಸ್​ ಕಮಿಷನರ್​ ಕಠಿಣ ಕ್ರಮ ಕೈಗೊಂಡಿದ್ದಾರೆ.

 

WhatsApp Group Join Now
Telegram Group Join Now
Share This Article