ರೈಲಿನಲ್ಲಿ ಚಾಕು ಇರಿತ ಪ್ರಕರಣದ ಆರೋಪಿ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ: ರೇಖಾ ಚಿತ್ರ ಬಿಡುಗಡೆ

Ravi Talawar
ರೈಲಿನಲ್ಲಿ ಚಾಕು ಇರಿತ ಪ್ರಕರಣದ ಆರೋಪಿ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ: ರೇಖಾ ಚಿತ್ರ ಬಿಡುಗಡೆ
WhatsApp Group Join Now
Telegram Group Join Now

ಬೆಳಗಾವಿ,18: ಚಲಿಸುವ ರೈಲಿನಲ್ಲಿ ಮಾರಣಾಂತಿಕ ಹಲ್ಲೆಗೈದು ಆರೋಪಿ ಪರಾರಿಯಾಗಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಆರೋಪಿಯ ರೇಖಾ ಚಿತ್ರವನ್ನು ರೈಲ್ವೆ ಇಲಾಖೆ ಸಿದ್ಧಪಡಿಸಿ ಬಿಡುಗಡೆಗೊಳಿಸಿದ್ದಾರೆ.

ಎರಡು ದಿನಗಳ ಹಿಂದೆ ಖಾನಾಪುರ ತಾಲ್ಲೂಕಿನ ಲೋಂಡಾದಲ್ಲಿ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿತ್ತು. ಟಿಕೆಟ್ ತೋರಿಸು ಎಂದಿದ್ದಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ಮೇಲೆ ಅಪರಿಚಿತ ಮುಸುಕುಧಾರಿ ವ್ಯಕ್ತಿ ಚೂರಿಯಿಂದ ದಾಳಿ ಮಾಡಿದ್ದ. ಘಟನೆಯಲ್ಲಿ ನಾಲ್ವರು ರೈಲ್ವೆ ಸಿಬ್ಬಂದಿ ಹಾಗೂ ಓರ್ವ ಪ್ರಯಾಣಿಕನ ಮೇಲೆ ದಾಳಿ ಆಗಿತ್ತು.

ಚಿಕಿತ್ಸೆ ಫಲಿಸದೇ ಉತ್ತರ ಪ್ರದೇಶ ರಾಜ್ಯದ ಝಾನ್ಸಿ ಮೂಲದ ಕೋಚ್ ಅಟೆಂಡರ್ ದೇವ‌ಋಷಿ ವರ್ಮಾ (23) ಮೃತಪಟ್ಟಿದ್ದರು. ಸದ್ಯ ಆರೋಪಿ ರೇಖಾಚಿತ್ರ ಹಾಗೂ ಸಿಸಿ ಕ್ಯಾಮರಾ ದೃಶ್ಯಗಳು ಲಭ್ಯವಾಗಿವೆ.

ಟಿಸಿ ಅಶ್ರಫ್ ಅಲಿ ಕಿತ್ತೂರು ಸೇರಿ ಇನ್ನುಳಿದ ಮೂವರೂ ಗುಣಮುಖರಾಗಿದ್ದು, ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಘಟನೆ ನಡೆದು ಎರಡು ದಿನ ಕಳೆದರೂ ಹಂತಕನ ಸುಳಿವು ಸಿಕ್ಕಿರಲಿಲ್ಲ. ರೈಲ್ವೆ ಪೊಲೀಸರಿಂದ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿ ಶೋಧಕ್ಕೆ ಪಾಂಡಿಚೇರಿಗೆ ತಂಡ ತೆರಳಿದೆ.

WhatsApp Group Join Now
Telegram Group Join Now
Share This Article