ಸ್ವಾತಿ ಮಲಿವಾಲ್ ವಿರುದ್ಧ ಬಿಭವ್ ಕುಮಾರ್ ಪ್ರತಿದೂರು

Ravi Talawar
ಸ್ವಾತಿ ಮಲಿವಾಲ್ ವಿರುದ್ಧ  ಬಿಭವ್ ಕುಮಾರ್ ಪ್ರತಿದೂರು
WhatsApp Group Join Now
Telegram Group Join Now

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ದೆಹಲಿಯ ತೀಸ್ ಹಜಾರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ತನ್ನ ಬಂಧನಕ್ಕೂ ಮುನ್ನ, ಬಿಭವ್ ಕುಮಾರ್ ಅವರು ದೆಹಲಿ ಪೊಲೀಸರಿಗೆ ಇಮೇಲ್ ಕಳುಹಿಸಿದ್ದು, ಮಲಿವಾಲ್ ಅವರ ಮೇಲಿನ ಹಲ್ಲೆ ಆರೋಪದ ಬಗ್ಗೆ ನಡೆಯುತ್ತಿರುವ ತನಿಖೆಯಲ್ಲಿ ಸಹಕರಿಸಲು ಸಿದ್ಧ ಎಂದು ಹೇಳಿದ್ದು, ತಮ್ಮ ದೂರಿನ ಬಗ್ಗೆಯೂ ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಮಲಿವಾಲ್ ಅವರು ಸಿಎಂ ಅವರ ಸಿವಿಲ್ ಲೈನ್ಸ್ ನಿವಾಸಕ್ಕೆ ‘ಅನಧಿಕೃತ ಪ್ರವೇಶ’ ಮಾಡಿದ್ದಾರೆ ಮತ್ತು ತಮ್ಮನ್ನು ‘ಮೌಖಿಕವಾಗಿ ನಿಂದಿಸಿದ್ದಾರೆ’ ಎಂದು ಆರೋಪಿಸಿ ಬಿಭವ್ ಕುಮಾರ್ ಶುಕ್ರವಾರ ಪೊಲೀಸರಿಗೆ ಪ್ರತಿದೂರು ದಾಖಲಿಸಿದ್ದಾರೆ.

WhatsApp Group Join Now
Telegram Group Join Now
Share This Article