ಹಾವಿನೊಂದಿಗೆ ಚಿಕಿತ್ಸೆಗೆ ಆಗಮಿಸಿದ ಯುವಕ

Ravi Talawar
ಹಾವಿನೊಂದಿಗೆ ಚಿಕಿತ್ಸೆಗೆ ಆಗಮಿಸಿದ ಯುವಕ
WhatsApp Group Join Now
Telegram Group Join Now

ಬೆಳಗಾವಿ,28: ಹಾವಿನೊಂದಿಗೆ ಚಿಕಿತ್ಸೆಗೆ ಆಗಮಿಸಿದ ಯುವಕನನ್ನು ನೋಡಿ ಆಸ್ಪತ್ರೆ ಸಿಬ್ಬಂದಿ ಕಕ್ಕಾಬಿಕ್ಕಿಯಾದ ಘಟನೆ ಸೋಮವಾರ ನಡೆದಿದೆ. ಬೆಳಗಾವಿ ತಾಲೂಕಿನ ಹುಂಚಾನಟ್ಟಿ ಗ್ರಾಮದ ಶಾಹಿದ್ ಎಂಬಾತನಿಗೆ ಹಾವು ಕಚ್ಚಿದೆ. ತನಗೆ ಕಚ್ಚಿದ ಹಾವಿನೊಂದಿಗೆ ಆತ ಬೀಮ್ಸ್ ಆಸ್ಪತ್ರೆಗೆ ಬಂದಿದ್ದಾನೆ. ಇದನ್ನು ನೋಡಿದ ಜನ ಮತ್ತು ಆಸ್ಪತ್ರೆ ಸಿಬ್ಬಂದಿ ಅರೆಕ್ಷಣ ಹೌಹಾರಿದರು.

ಮನೆ ಮುಂದೆ ಕಾಣಿಸಿಕೊಂಡ ಹಾವನ್ನು ಹಿಡಿದ ಶಾಹಿದ್ ಅದನ್ನು ಬೆಟ್ಟಕ್ಕೆ ‌ಬಿಡಲು ಸ್ನೇಹಿತರೊಂದಿಗೆ ತೆರಳಿದ್ದಾನೆ. ಈ ಸಂದರ್ಭದಲ್ಲಿ ಆತನಿಗೆ ಕಚ್ಚಿದೆ ಎಂದು ತಿಳಿದುಬಂದಿದೆ.

ಸ್ನೇಹಿತ ರಿಹಾನ್ ಪ್ರತಿಕ್ರಿಯಿಸಿ, “ತನ್ನ ಮನೆ ಕಡೆ ಬರುತ್ತಿದ್ದ ಹಾವು ಹಿಡಿಯಲು ಹೋದಾಗ ಆತನ ಕೈಗೆ ಕಚ್ಚಿದೆ. ಚಿಕಿತ್ಸೆ ನೀಡಲು ಸುಲಭವಾಗಲಿ ಎಂದು ಅದನ್ನು ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದೇವೆ” ಎಂದು ಹೇಳಿದರು.

ಚಿಕಿತ್ಸೆ ಪಡೆದ ಬಳಿಕ ಮನೆಗೆ ಮರಳಿದ ಶಾಹಿದ್, ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡುವುದಾಗಿ ತಿಳಿಸಿದ್ದಾನೆ.

WhatsApp Group Join Now
Telegram Group Join Now
Share This Article