ಬ್ರಿಜ್​ ಭೂಷಣ್ ಶರಣ್​ ಸಿಂಗ್ ಪುತ್ರ ಕರಣ್​ ಬೆಂಗಾವಲು ವಾಹನ ಡಿಕ್ಕಿ: ಇಬ್ಬರು ಸಾವು

Ravi Talawar
ಬ್ರಿಜ್​ ಭೂಷಣ್ ಶರಣ್​ ಸಿಂಗ್ ಪುತ್ರ ಕರಣ್​ ಬೆಂಗಾವಲು ವಾಹನ ಡಿಕ್ಕಿ: ಇಬ್ಬರು ಸಾವು
WhatsApp Group Join Now
Telegram Group Join Now

ಕೇಸರ್‌ಗಂಜ್‌ನ ,29: ಕೇಸರ್‌ಗಂಜ್‌ನ ಬಿಜೆಪಿ ಅಭ್ಯರ್ಥಿ ಕರಣ್‌ಭೂಷಣ್ ಸಿಂಗ್  ಅವರ ಬೆಂಗಾವಲು ವಾಹನ ಡಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಗೊಂಡಾದ ಕರ್ನಲ್‌ಗಂಜ್-ಹುಜೂರ್‌ಪುರ ರಸ್ತೆಯ ಬೈಕುಂತ್ ಪದವಿ ಕಾಲೇಜು ಬಳಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಚಾಲಕ ಕಾರು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ಕೂಡಲೇ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದರು. ರಸ್ತೆಗಿಳಿದು ಪ್ರತಿಭಟನೆ ನಡೆಸುವುದರೊಂದಿಗೆ ಆಕ್ರೋಶಗೊಂಡ ಜನರು ಕಾರಿಗೆ ಬೆಂಕಿ ಹಚ್ಚಲು ಯತ್ನಿಸಿದರು.

ಕತ್ರಾಬಜಾರ್, ಪರಸ್ಪುರ್, ಕೌಡಿಯಾ ಮತ್ತು ಕರ್ನಲ್ಗಂಜ್ ಪೊಲೀಸ್ ಠಾಣೆಗಳ ಪೊಲೀಸ್ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಕರ್ನಲ್‌ಗಂಜ್-ಹುಜೂರ್‌ಪುರ ರಸ್ತೆಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಜಾಮ್‌ ಉಂಟಾಗಿತ್ತು. ಅಪಘಾತದ ಸಮಯದಲ್ಲಿ ಕರಣ್ ಭೂಷಣ್ ವಾಹನದಲ್ಲಿ ಇದ್ದರಾ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.

WhatsApp Group Join Now
Telegram Group Join Now
Share This Article