ಪ್ರಜ್ವಲ್ ಬಗ್ಗೆ ನಕಾರಾತ್ಮಕ ಪ್ರಚಾರ ಮಾಡಬೇಡಿ: ವಕೀಲರು ಮಾಧ್ಯಮ ಪ್ರತಿನಿಧಿಗಳಿಗೆ ಮನವಿ

Ravi Talawar
ಪ್ರಜ್ವಲ್ ಬಗ್ಗೆ ನಕಾರಾತ್ಮಕ ಪ್ರಚಾರ ಮಾಡಬೇಡಿ: ವಕೀಲರು ಮಾಧ್ಯಮ ಪ್ರತಿನಿಧಿಗಳಿಗೆ ಮನವಿ
WhatsApp Group Join Now
Telegram Group Join Now

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಹಂತದಲ್ಲಿದ್ದು ಯಾವುದೇ ರೀತಿಯಲ್ಲಿ ನಕಾರಾತ್ಮಕ ಪ್ರಚಾರ ಮಾಡಬೇಡಿ ಎಂದು ಅವರ ಪರ ವಕೀಲರು ಮಾಧ್ಯಮ ಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ಬೆಂಗಳೂರಿನ ಸಿಐಡಿ ಕಚೇರಿಗೆ ಕರೆತರಲಾಗಿತ್ತು. ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಪ್ರಜ್ವಲ್ ಪರ ವಕೀಲ ಅರುಣ್, ‘ಅನವಶ್ಯಕವಾಗಿ ಯಾವುದೇ ಋಣಾತ್ಮಕ ಪ್ರಚಾರ ಬೇಡ. ಪ್ರಜ್ವಲ್ ರೇವಣ್ಣ ಅವರು ಎಸ್‌ಐಟಿಗೆ ಸಹಕರಿಸಲು ಮುಂದಾಗಿದ್ದಾರೆ. ಎಸ್‌ಐಟಿಗೂ ಮುನ್ನ ಬೆಂಗಳೂರಿಗೆ ಬಂದಿರುವ ಅವರ ಸಂಪೂರ್ಣ ಉದ್ದೇಶ ತಮ್ಮ ಮಾತಿಗೆ ಬದ್ಧವಾಗಿರಬೇಕು ಎಂಬುದು, ಅವರು ತನಿಖೆಗೆ ಸಂಪೂರ್ಣ ಸಹಕರಿಸುತ್ತಾರೆ ಎಂದರು.

WhatsApp Group Join Now
Telegram Group Join Now
Share This Article