ಎಲ್ಲಿದ್ದರೂ ದೆಹಲಿಯ ಕೆಲಸ ನಿಲ್ಲುವುದಿಲ್ಲ: ಸಿಎಂ ಕೇಜ್ರಿವಾಲ್

Ravi Talawar
ಎಲ್ಲಿದ್ದರೂ ದೆಹಲಿಯ ಕೆಲಸ ನಿಲ್ಲುವುದಿಲ್ಲ: ಸಿಎಂ ಕೇಜ್ರಿವಾಲ್
WhatsApp Group Join Now
Telegram Group Join Now

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅವಧಿ ಶನಿವಾರ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆ ತಾವು ಶರಣಾಗುವ ಮುನ್ನ ದೆಹಲಿ ಜನತೆಗೆ ವಿಡಿಯೋ ಸಂದೇಶ ನೀಡಿದ್ದಾರೆ.

ಈ ಬಗ್ಗೆ ತಮ್ಮ ವಿಡಿಯೋ ಸಂದೇಶದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ನಾನು ಒಳಗಿರಲಿ ಅಥವಾ ಹೊರಗಿರಲಿ. ಎಲ್ಲಿದ್ದರೂ ದೆಹಲಿಯ ಕೆಲಸ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ನನಗೆ ಚುನಾವಣಾ ಪ್ರಚಾರ ಮಾಡಲು 21 ದಿನಗಳ ಅನುಮತಿ ನೀಡಿತ್ತು. ನಾಳೆಗೆ ಈ ಅವಧಿ ಪೂರ್ಣಗೊಳ್ಳಲಿವೆ. ಭಾನುವಾರ ನಾನು ಶರಣಾಗಬೇಕು. ಭಾನುವಾರ ಮಧ್ಯಾಹ್ನ 3 ಗಂಟೆಗೆ ಜೈಲಿಗೆ ಹೋಗುತ್ತೇನೆ. ಅವರು (ಬಿಜೆಪಿ) ಎಷ್ಟು ದಿನ ನನ್ನನ್ನು ಜೈಲಿನಲ್ಲಿ ಇಡುತ್ತಾರೋ ಗೊತ್ತಿಲ್ಲ, ಆದರೆ, ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ನಾನು ಜೈಲಿಗೆ ಹೋಗುತ್ತಿದ್ದೇನೆ ಎಂಬ ಮಾತನ್ನು ನೆನಪಿಟ್ಟುಕೊಳ್ಳಿ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article