ಉತ್ತರಾಖಂಡ ಚಾರಣಿಗರ ರಕ್ಷಣೆ ಕಾರ್ಯ: ಮತ್ತೆ ನಾಲ್ಕು ಚಾರಣಿಗರ ಮೃತ ದೇಹ ಪತ್ತೆ

Ravi Talawar
ಉತ್ತರಾಖಂಡ ಚಾರಣಿಗರ ರಕ್ಷಣೆ ಕಾರ್ಯ: ಮತ್ತೆ ನಾಲ್ಕು ಚಾರಣಿಗರ ಮೃತ ದೇಹ ಪತ್ತೆ
WhatsApp Group Join Now
Telegram Group Join Now

ಬೆಂಗಳೂರು: ಉತ್ತರಾಖಂಡ ಚಾರಣಿಗರ ರಕ್ಷಣೆ ಕಾರ್ಯ ನಡೆಯುತ್ತಿದ್ದು, ಮತ್ತೆ ನಾಲ್ಕು ಮೃತ ದೇಹಗಳು ಪತ್ತೆಯಾಗಿವೆ. ಈ ಸಂಬಂಧ ಪ್ರತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವ ಕೃಷ್ಣ ಬೈರೇಗೌಡ, ಇಂದು ಮುಂಜಾನೆ ಕಾರ್ಯಾಚರಣೆಯಲ್ಲಿ ಇನ್ನೂ 4 ಶವಗಳನ್ನು ಪತ್ತೆ ಮಾಡಲಾಗಿದ್ದು, ಉತ್ತರಕಾಶಿಗೆ ವಿಮಾನದಲ್ಲಿ ರವಾನಿಸಲಾಗಿದೆ.

ಪದ್ಮನಾಭ ಕೆ.ಪಿ, ವೆಂಕಟೇಶ್ ಪ್ರಸಾದ್ ಕೆ, ಅನಿತಾ ರಂಗಪ್ಪ, ಪದ್ಮಿನಿ ಹೆಗ್ಡೆ ಇಂದು ಪತ್ತೆಯಾದ ಮೃತ ದುರ್ದೈವಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಉತ್ತರಕಾಶಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 11 ಗಂಟೆಗೆ ಎಲ್ಲ 9 ಮೃತದೇಹಗಳನ್ನು ವಿಮಾನದ ಮೂಲಕ ಡೆಹ್ರಾಡೂನ್‌ಗೆ ತರಲಾಗುವುದು. ಡೆಹ್ರಾಡೂನ್‌ನಲ್ಲಿ ಎಂಬಾಮಿಂಗ್​ ಮಾಡಲಾಗಿದೆ. ಎಲ್ಲ 9 ಶವಗಳನ್ನು ಬೆಂಗಳೂರಿಗೆ ಸಾಗಿಸಲು ನಾವು ಈಗಾಗಲೇ ಚಾರ್ಟರ್​​ ಫ್ಲೈಟ್​​​ ವ್ಯವಸ್ಥೆ ಮಾಡಿದ್ದೇವೆ. ಉತ್ತರಾಖಂಡದ ಮುಖ್ಯ ಕಾರ್ಯದರ್ಶಿಯವರ ಭೇಟಿ ಮಾಡಲಾಗಿದ್ದು, ಮುಖ್ಯ ಕಾರ್ಯದರ್ಶಿಯವರೊಂದಿಗಿನ ಸಭೆಯಲ್ಲಿ ಮೃತದೇಹಗಳ ಸಾಗಣೆಗೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ. ಇಂದೇ ಮೃತ ದೇಹಗಳ ರವಾನೆ ಮಾಡಲಾವುದು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article