ಕಲುಷಿತ ನೀರು ಸೇವಿಸಿ ಆರು ಮಂದಿ ದುರ್ಮರಣ: ಸಚಿವ ಡಾ.ಜಿ.ಪರಮೇಶ್ವರ ಆಸ್ಪತ್ರೆಗೆ ಭೇಟಿ

Ravi Talawar
ಕಲುಷಿತ ನೀರು ಸೇವಿಸಿ ಆರು ಮಂದಿ ದುರ್ಮರಣ: ಸಚಿವ ಡಾ.ಜಿ.ಪರಮೇಶ್ವರ ಆಸ್ಪತ್ರೆಗೆ ಭೇಟಿ
WhatsApp Group Join Now
Telegram Group Join Now

ತುಮಕೂರು: ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಕಲುಷಿತ ನೀರು ಸೇವಿಸಿ ಅಂಬೆಗಾಲಿಡುವ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ನೂರಾರು ನಿವಾಸಿಗಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಚಿಕ್ಕದಾಸಪ್ಪ (76) ಮತ್ತು ಪೆದ್ದಣ್ಣ (74) ಎಂಬ ಇಬ್ಬರು ವಯೋವೃದ್ಧರು ಇಲ್ಲಿನ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಐಸಿಯುಗಳಲ್ಲಿ ಮೂವರು ವೃದ್ಧರು, ಮೂವರು ಮಕ್ಕಳು ಸೇರಿದಂತೆ ಹತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ಗುರುವಾರ ಇಲ್ಲಿನ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮತ್ತು ಜಿಲ್ಲಾ ಸರ್ಜನ್ ಡಾ.ಅಸ್ಗರ್ ಬೇಗ್ ಸಚಿವರ ಜೊತೆಗಿದ್ದರು. ಚಿನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳಿಗೆ ಶುದ್ದ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮಕೈಗೊಳ್ಳಲು ಸಚಿವರು ಡಿಸಿಗೆ ಸೂಚಿಸಿದರು. ಈ ಸಂಬಂಧ ಶಾಸಕ ಹಾಗೂ ಸಹಕಾರ ಸಚಿವ ಕೆ ಎನ್ ರಾಜಣ್ಣ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು.

WhatsApp Group Join Now
Telegram Group Join Now
Share This Article