ರಾಜ್ಯಾದ್ಯಂತ ಮುಸ್ಲಿಂ ಬಾಂಧವರ ಬಕ್ರೀದ್‌ ಹಬ್ಬ: ಸಾಮೂಹಿಕ ಪ್ರಾರ್ಥನೆ

Ravi Talawar
ರಾಜ್ಯಾದ್ಯಂತ ಮುಸ್ಲಿಂ ಬಾಂಧವರ ಬಕ್ರೀದ್‌ ಹಬ್ಬ: ಸಾಮೂಹಿಕ ಪ್ರಾರ್ಥನೆ
WhatsApp Group Join Now
Telegram Group Join Now

ಬಳ್ಳಾರಿ/ಶಿವಮೊಗ್ಗ: ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಮುಸ್ಲಿಂ ಬಾಂಧವರು ರಾಜ್ಯಾದ್ಯಂತ ಶ್ರದ್ಧಾ- ಭಕ್ತಿಯಿಂದ ಆಚರಿಸುತ್ತಿದ್ದಾರೆ.

ಬಕ್ರೀದ್ ವಿಶೇಷ: ಪ್ರವಾದಿ ಇಬ್ರಾಹಿಂ ಅವರು ತಮ್ಮ ಪುತ್ರನನ್ನು ದೇವರಿಗೆ ಅರ್ಪಣೆ ಮಾಡಲು ಮುಂದಾದಾಗ ಮಹಮ್ಮದ್ ಪೈಗಂಬರರು ಇಬ್ರಾಹಿಂ ಪುತ್ರನನ್ನು ಬಲಿ‌ ನೀಡದೇ ಕುರಿಯನ್ನು ಅರ್ಪಣೆ ಮಾಡುವಂತೆ ಹೇಳುತ್ತಾರೆ. ಆಗ ಕುರಿಯನ್ನು ಅರ್ಪಿಸುತ್ತಾರೆ. ಅಂದಿನಿಂದ ಬಕ್ರೀದ್ ಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಬಕ್ರೀದ್​ನಲ್ಲಿ ಮುಖ್ಯವಾಗಿ ಮುಸಲ್ಮಾನರು ದಾನ ಧರ್ಮಗಳನ್ನು ಮಾಡುವವರು. ಇಂದು ಪ್ರತಿಯೊಬ್ಬ ಮುಸಲ್ಮಾನರು ದಾನವನ್ನು ಮಾಡುತ್ತಾರೆ. ಬಕ್ರೀದ್​ನಲ್ಲಿ ನೀಡುವ ಬಲಿಯಲ್ಲಿ ಮೂರು ಭಾಗಗಳನ್ನು ಮಾಡಲಾಗುತ್ತದೆ. ಒಂದು ಭಾಗವನ್ನು ದಾನ ಮಾಡುವವರು ತಾವೇ ಇಟ್ಟುಕೊಂಡು, ಉಳಿದ ಎರಡು ಭಾಗಗಳಲ್ಲಿ ಒಂದು ಭಾಗವನ್ನು ಸಂಬಂಧಿಕರಿಗೆ ಹಾಗೂ ಇನ್ನೊಂದು ಭಾಗವನ್ನು ಅಶಕ್ತರಿಗೆ ನೀಡಲಾಗುತ್ತದೆ. ಇದೇ ಬಕ್ರೀದ್​ನ ವಿಶೇಷ ಎನ್ನಬಹುದು.

ಬಕ್ರೀದ್​ನ ಸಾಮೂಹಿಕ ಪ್ರಾರ್ಥನೆಯ ನಂತರ ಪರಸ್ಪರ ಶುಭಾಶಯ ಕೋರಿಕೊಳ್ಳುತ್ತಾರೆ. ನಂತರ ತಮ್ಮ ತಮ್ಮ ಮನೆಗಳಿಗೆ ತೆರಳಿ ಕುರ್ಬಾನಿಯನ್ನು ನೀಡುತ್ತಾರೆ. ಇಂದು ಎಲ್ಲರೂ ತಮ್ಮ ತಮ್ಮ ಸಂಬಂಧಿಕರ ಮನೆಗೆ ಭೇಟಿ ನೀಡಿ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ‌.

ಬಕ್ರೀದ್ ಪ್ರಯುಕ್ತ ಶಿವಮೊಗ್ಗದ ಮುಸ್ಲಿಂ ಬಾಂಧವರು ಸರ್.ಎಂ.ವಿಶ್ವೇಶ್ವರಯ್ಯ ರಸ್ತೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದರು. ಬಕ್ರೀದ್ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

WhatsApp Group Join Now
Telegram Group Join Now
Share This Article