ಕ್ರೀಡಾ, ಪರಿಶಿಷ್ಟ ಪಂಗಡಗಳ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್​​​

Ravi Talawar
ಕ್ರೀಡಾ, ಪರಿಶಿಷ್ಟ ಪಂಗಡಗಳ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್​​​
WhatsApp Group Join Now
Telegram Group Join Now

ಬೆಂಗಳೂರು, ಜೂನ್​ 19: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ತಲೆದಂಡವಾಗಿದೆ. ಸಚಿವ ಬಿ. ನಾಗೇಂದ್ರ  ರಾಜಿನಾಮೆ ನೀಡುತ್ತಿದ್ದಂತೆ ಇವರು ನೋಡಿಕೊಳ್ಳುತ್ತಿದ್ದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ಬಳಿಯೇ ಇವೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ಇಲಾಖೆ ಪ್ರಗತಿ ಪರೀಶಲನಾ ಸಭೆ ನಡೆಸಿದರು.

ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ, ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸದ್ದಕ್ಕೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು.

ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್​ಗಳಿಗೆ ಇಷ್ಟೆಲ್ಲ ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ? ಈ ಬಗ್ಗೆ ನಿರಂತರ ನಿಗಾ ಏಕೆ ವಹಿಸುತ್ತಿಲ್ಲ? ಫಲಿತಾಂಶದಲ್ಲಿ ಏರಿಕೆ ಏಕೆ ಆಗುತ್ತಿಲ್ಲ ಎಂದು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

ನಿಯಮಿತವಾಗಿ ಹಾಸ್ಟೆಲ್​ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು. ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

WhatsApp Group Join Now
Telegram Group Join Now
Share This Article