ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತ; ಬೆಲೆ ದಿಢೀರ್ ಏರಿಕೆ

Ravi Talawar
ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತ; ಬೆಲೆ ದಿಢೀರ್ ಏರಿಕೆ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 30: ಕರ್ನಾಟಕದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರ್ತಿಲ್ಲ.‌ ಹೀಗಾಗಿ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದ್ದು,‌ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ.‌ ಹಬ್ಬದ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯಾತೆ ಇದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಯಶವಂತಪುರ ಹಾಗೂ ದಾಸನಪುರ ಎಪಿಎಂಸಿಗೆ ಬುಧವಾರ 127 ಲಾರಿಗಳಲ್ಲಿ 38,415 ಚೀಲ ಈರುಳ್ಳಿ ಆವಕವಾಗಿತ್ತು. ಇದರಲ್ಲಿ ರಾಜ್ಯದ ಹತ್ತಿಪ್ಪತ್ತು ಲಾರಿಗಳು ಮಾತ್ರ ಸೇರಿವೆ. ಉಳಿದವೆಲ್ಲ ಪೂನಾದಿಂದ ಬಂದಿವೆ. ಸಗಟು ದರ ಕ್ವಿಂಟಲ್‌ಗೆ ಕನಿಷ್ಠ 2 ಸಾವಿರದಿಂದ ಗರಿಷ್ಠ 4500 ರೂ. ಇತ್ತು. ನಗರದ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 55ರಿಂದ 60 ರೂ.ಗೆ ಮಾರಾಟವಾಗಿದೆ.

WhatsApp Group Join Now
Telegram Group Join Now
Share This Article