ಕುರಿ ಹೊಲಸು ತಿನ್ನಲ್ಲ, ಕುರುಬ ತಪ್ಪುಮಾಡಲ್ಲ: ಈಶ್ವರಾನಂದಪುರಿ ಸ್ವಾಮೀಜಿ

Ravi Talawar
ಕುರಿ ಹೊಲಸು ತಿನ್ನಲ್ಲ, ಕುರುಬ ತಪ್ಪುಮಾಡಲ್ಲ: ಈಶ್ವರಾನಂದಪುರಿ ಸ್ವಾಮೀಜಿ
WhatsApp Group Join Now
Telegram Group Join Now

ಹೊಸದುರ್ಗ: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದುರುದ್ದೇಶದಿಂದ ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಹೊಸದುರ್ಗ ಕನಕ ಗುರುಪೀಠ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.

ಒಂದು ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಹುನ್ನಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಗೌರವ ಅಷ್ಟಕ್ಕೂ ಅಧಿಕಾರದಲ್ಲಿರುವುದು ಹಿಂದುಳಿದ ವರ್ಗದ ಪ್ರಬಲ ಜನನಾಯಕ ಅವರು ದೀನ ದುರ್ಬಲರ ಮಹಿಳೆಯರ ಶೋಷಿತರ ಪರವಾಗಿ ಕೆಲಸಮಾಡುತ್ತಿರುವ ನಾಯಕನ ವರ್ಚಸ್ಸು ಮತ್ತು ಜನಪ್ರಿಯತೆಯನ್ನು ಸಹಿಸಲಾಗದ ಪಟ್ಟಬದ್ರ ಹಿತಾಸಕ್ತಿಗಳು ಮಾಡುತ್ತಿರುವ ಕುತಂತ್ರ ಇದನ್ನ ರಾಜ್ಯದ ಶೋಷಿತ ಸಮುದಾಯ ಸಹಿಸುವುಲ್ಲ ಯಾವ ಅಕ್ರಮವನ್ನೂ ಮಾಡದ ಸಿದ್ದರಾಮಯ್ಯ ಅವರ ಪರವಾಗಿ ನಾವೆಲ್ಲರೂ ಇರುತ್ತೇವೆ. ಬೃಹತ್ ಜನಾಂದೋಲನ ಮಾಡುವುದಾಗಿಯೂ ಎಚ್ಚರಿಕೆ ನೀಡಲು ಬಯಸುತ್ತೇವೆ ಎಂದಿದ್ದಾರೆ.

WhatsApp Group Join Now
Telegram Group Join Now
Share This Article