ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಮಾಡಲು ಸಾಧ್ಯ : ಸರ್ವೋತ್ತಮ ಜಾರಕಿಹೊಳಿ

Chandrashekar Pattar
ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಮಾಡಲು ಸಾಧ್ಯ : ಸರ್ವೋತ್ತಮ ಜಾರಕಿಹೊಳಿ
Oplus_16908288
WhatsApp Group Join Now
Telegram Group Join Now

ಮೂಡಲಗಿ : ಉಳಿಪೆಟ್ಟು ಬಿದ್ದ ಕಲ್ಲು ಸುಂದರ ಮೂರ್ತರೂಪ ಪಡೆಯುವ ಹಾಗೆ, ಜೀವನದಲ್ಲಿ ಮನುಷ್ಯನಿಗೆ ಎದುರಾಗುವ ಅನೇಕ ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಸೋಮವಾರದಂದು ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್, ಗೋಕಾಕ ಇವರ ಆಶ್ರಯದಲ್ಲಿ ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಕಾರ್ಯಾಗಾರ ಕಾರ್ಯಕ್ರಮದ ಘನ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಐಎಎಸ್, ಕೆಎಎಸ್ ಗಳಂತಹ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಮ್ಮ ಭಾಗದ ಬಡ ವಿದ್ಯಾರ್ಥಿಗಳಿಗೆ ಆನೂಕೂಲವಾಗಲೆಂದೇ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಮೂಡಲಗಿಯಲ್ಲಿ ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರ ಎಂಬ ಉಚಿತ ಗ್ರಂಥಾಲಯ ತೆರೆದಿದ್ದು, ಸ್ಪರ್ಧಾರ್ಥಿಗಳು ಇದರ ಲಾಭ ಪಡೆಯಬೇಕೆಂದು ಸಲಹೆ ನೀಡಿದರು.

ಅತಿಥಿಯಾಗಿ ಆಗಮಿಸಿದ್ದ ತಹಸೀಲ್ದಾರರಾದ ಶ್ರೀಶೈಲ ಗುಡುಮೆ ಮಾತನಾಡಿ, ಯೋಜನಾಬದ್ಧ ಜೀವನ, ನಿರಂತರ ಓದು ಹಾಗೂ ಧೃಢ ಸಂಕಲ್ಪದಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಫಲರಾಗಬಹುದು. ಕೇಂದ್ರದ ರೈಲ್ವೇ, ಏರ್ ರ್ಫೋರ್ಸ್, ನೇವಿಗಳಂತಹ ಅವಕಾಶಗಳನ್ನು ಕೂಡ ಬಳಸಿಕೊಂಡು ಯಶಸ್ವಿ ಜೀವನ ಕಟ್ಟಿಕೊಳ್ಳಬಹುದಾಗಿದೆ ಎಂದು ಕಿವಿಮಾತು ಹೇಳಿದರು.

ಪ್ರಾಚಾರ್ಯರಾದ ಮಹೇಶ ಕಂಬಾರವರು ಮಾತನಾಡಿ ನಮ್ಮ ಹತ್ತಿರ ಎಷ್ಟು ಇದೆ ಅನ್ನುವುದು ಮುಖ್ಯವಲ್ಲ, ನಾವು ಬೇರೆಯವರಿಗೆ ಏನು ಕೊಟ್ಟಿದ್ದೇವೆ ಅನ್ನುವುದು ಬಹು ಮುಖ್ಯ. ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಗಗನ ಕುಸುಮವಾಗಿದ್ದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳನ್ನು ಉಚಿತವಾಗಿ ಓದಲು ಗ್ರಂಥಾಲಯ ಅನುಕೂಲ ಮಾಡಿಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೋಳಿಯವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಬಣ್ಣಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪಾಂಚಜನ್ಯ ಸ್ಪರ್ಧಾತ್ಮಕ ಪರೀಕ್ಷಾ ಅಕಾಡೆಮಿ ಬೆಳಗಾವಿಯ ಮುಖ್ಯಸ್ಥರಾದ ಪ್ರವೀಣ ಮಗದುಮರವರು ಪರೀಕ್ಷಾರ್ಥಿಗಳಿಗೆ ಯಶಸ್ಸಿನ ಮಾರ್ಗೋಪಾಯ ಕಾರ್ಯಾಗಾರ ನಡೆಸಿಕೊಟ್ಟರು. ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರದ ಮೇಲ್ವಿಚಾರಕರಾದ ವಸಂತ ನಾಯಿಕವಾಡಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಮಹಾದೇವ ಶೇಕ್ಕಿ, ಮುಖಂಡರಾದ ಸಂತೋಷ್ ಸೋನವಾಲಕರ, ಅನ್ವರ್ ನದಾಫ್, ಹನಮಂತ ಗುಡ್ಲಮನಿ, ಪಾಂಡುರಂಗ ಮಹೇಂದ್ರಕರ, ಕೇದಾರಿ ಭಸ್ಮೆ, ಸಿದ್ದಣ್ಣಾ ದುರದುಂಡಿ, ರವೀಂದ್ರ ಸಣ್ಣಕ್ಕಿ, ಹುಸೇನ್ ಶೇಖ, ಬಸು ಝಂಡೇಕುರುಬರ, ಸೇರಿದಂತೆ ಅನೇಕ ಪರೀಕ್ಷಾರ್ಥಿಗಳು ಉಪಸ್ಥಿತರಿದ್ದರು. ಜಯಶ್ರೀ ಮದಿಹಳ್ಳಿ ನಿರೂಪಿಸಿ ವಂದಿಸಿದರು.

WhatsApp Group Join Now
Telegram Group Join Now
Share This Article