ಬಳ್ಳಾರಿ ಸೆಂಟ್ರಲ್​ ಜೈಲಿಗೆ ನಟ ದರ್ಶನ್ ​ಎಂಟ್ರಿ; ಹೈ-ಸೆಕ್ಯೂರಿಟಿ ಸೆಲ್​ನಲ್ಲಿಡಲು ಸಿದ್ಧತೆ

Ravi Talawar
ಬಳ್ಳಾರಿ ಸೆಂಟ್ರಲ್​ ಜೈಲಿಗೆ ನಟ ದರ್ಶನ್ ​ಎಂಟ್ರಿ; ಹೈ-ಸೆಕ್ಯೂರಿಟಿ ಸೆಲ್​ನಲ್ಲಿಡಲು ಸಿದ್ಧತೆ
WhatsApp Group Join Now
Telegram Group Join Now

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವ​ರನ್ನು ಇಂದು ಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇದುವರೆಗೆ ದರ್ಶನ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇಂದು ಬಿಗಿ ಭದ್ರತೆಯಲ್ಲಿ ಬಳ್ಳಾರಿಯ ಜೈಲಿಗೆ ಪೊಲೀಸ್​ ವಾಹನಗಳು ಎಂಟ್ರಿಕೊಟ್ಟಿವೆ.

ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾತಸಂದ್ರ ಟೋಲ್ ದಾಟಿ, ಶಿರಾ ಮೂಲಕ ಬೆಂಗಳೂರಿನ ಪೊಲೀಸರ ಭದ್ರತೆಯೊಂದಿಗೆ ಟಿಟಿ ವಾಹನದಲ್ಲಿ ದರ್ಶನ್ ಅವರನ್ನು ಕರೆತರಲಾಯಿತು. ಬೆಳಗ್ಗಿನ ಜಾವ 4.30ಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಹೊರಟ ಪೊಲೀಸ್​ ವಾಹನ ಬೆಳಗ್ಗೆ ‌9.45ರ ಸುಮಾರಿಗೆ ಬಳ್ಳಾರಿ ಸೆಂಟ್ರಲ್ ಜೈಲು ತಲುಪಿದೆ. ಪೂಮಾ ಕಂಪನಿಯ ಬ್ಲ್ಯಾಕ್ ಟಿ-ಶರ್ಟ್​ ಜೀನ್ಸ್ ಧರಿಸಿದ್ದ ದರ್ಶನ್ ಬಲಗೈಯಲ್ಲಿ ಬ್ಯಾಂಡೇಜ್ ಕಟ್ಟಿಕೊಂಡಿದ್ದರು.

ಪೊಲೀಸ್​ ವಾಹನದಿಂದ ಇಳಿದ ದರ್ಶನ್ ಜೈಲು ಪ್ರವೇಶದ್ವಾರದ ಎಂಟ್ರಿ ಪುಸ್ತಕದಲ್ಲಿ ಸಹಿ‌ ಮಾಡಿದರು. ಆಂತರಿಕ ಭದ್ರತಾ ವಿಭಾಗದಲ್ಲಿ ತಪಾಸಣೆ, ನಂತರ ಜೈಲು ವೈದ್ಯಾಧಿಕಾರಿಗಳು ಅವರ ಆರೋಗ್ಯ ತಪಾಸಣೆ ನಡೆಸಿದ್ದು, ಬಳಿಕ ಹೈ-ಸೆಕ್ಯೂರಿಟಿ ಸೆಲ್​ಗೆ ಕಳುಹಿಸಲಾಯಿತು‌. ಯಾರೊಬ್ಬರೂ ಎಂಟ್ರಿಯಾಗದಂತೆ ಹೈ-ಸೆಕ್ಯೂರಿಟಿ ಸೆಲ್ ನಿರ್ಮಾಣ ಮಾಡಲಾಗಿದೆ ಎಂದು ಬಳ್ಳಾರಿ ಜೈಲಿನ ಮೂಲಗಳು ತಿಳಿಸಿವೆ.

WhatsApp Group Join Now
Telegram Group Join Now
Share This Article