ಬೆಂಗಳೂರು: 2025ರ ಏರೋ ಇಂಡಿಯಾ ನಾಲ್ಕನೇ ದಿನದ ಪ್ರದರ್ಶನ ಬೆಂಗಳೂರನ್ನು ಅಕ್ಷರಶಃ ಸ್ತಬ್ಧಗೊಳಿಸಿತು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಬಳ್ಳಾರಿ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು, ಸುಮಾರು ನಾಲ್ಕು ಕಿಲೋಮೀಟರ್ ಉದ್ದದವರೆಗೂ ಸಾವಿರಾರು ವಾಹನಗಳು ಸಿಕ್ಕಿಹಾಕಿಕೊಂಡವು.
ಸಿಟಿ ಟ್ರಾಫಿಕ್ ಪೊಲೀಸರು ದಿನದ ಆರಂಭದಲ್ಲಿಯೇ ಸಲಹೆಗಳನ್ನು ನೀಡಿದರು, ಟ್ರಾಫಿಕ್ ಜಾಮ್ ತಪ್ಪಿಸಲು ವಾಹನ ಚಾಲಕರಿಗೆ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚಿಸಲಾಗಿತ್ತು. ಈ ಪ್ರಯತ್ನಗಳ ಹೊರತಾಗಿಯೂ, ಮುಖ್ಯ ಮತ್ತು ಸರ್ವಿಸ್ ರಸ್ತೆಗಳೆರಡರಲ್ಲೂ ಅಪಾರ ಪ್ರಮಾಣದ ದಟ್ಟಣೆ ಉಂಟಾಗಿತ್ತು. ಅನೇಕ ಪ್ರಯಾಣಿಕರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡರು.
ಏರ್ ಶೋ ವೀಕ್ಷಿಸಲು ಟಿಕೆಟ್ ಖರೀದಿಸಿದ ಹಲವಾರು ಜನರು ಟ್ರಾಫಿಕ್ನಲ್ಲಿ ಸಿಕ್ಕಿಬಿದ್ದ ನಂತರ ಕಾರ್ಯಕ್ರಮವನ್ನು ತಪ್ಪಿಸಿಕೊಂಡರು.
ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹತಾಶೆ ವ್ಯಕ್ತಪಡಿಸಿದರು. ಕೆಲವರು ಟಿಕೆಟ್ ಮರುಪಾವತಿಗೆ ಒತ್ತಾಯಿಸಿದರು, ಕಳಪೆ ಟ್ರಾಫಿಕ್ ನಿರ್ವಹಣೆಗೆ ಆಕ್ರೋಶ ವ್ಯಕ್ತ ಪಡಿಸಿದರು.