ಬೆಂಗಳೂರು : ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯಾಗಿದೆ. ಮುಂದಿನ ದಿನಗಳಲ್ಲಿಯೂ ವರ್ಷಧಾರೆ ಸುರಿಯುವ ಬಗ್ಗೆ ರಾಜ್ಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಅಲರ್ಟ್ ಘೋಷಣೆ : ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾಗಮಂಡಲ, ಮಹಾಲಿಂಗಪುರ, ತಾವರಗೇರಾ, ಅಥಣಿ, ಗೋಕಾಕ್, ಬೀದರ್, ಕುಷ್ಟಗಿ, ಕಾರ್ಕಳ, ಗಂಗಾವತಿ, ಭಾಲ್ಕಿ, ಸೇಡಬಾಳ, ರಬಕವಿ, ಮುದಗಲ್, ಮುದ್ದೇಬಿಹಾಳ, ಮಸ್ಕಿ, ಮಧುಗಿರಿ, ಹಿರಿಯೂರು, ಚಿತ್ತಾಪುರ್, ಬೆಳಗಾವಿ, ಬಾದಾಮಿ ಹಾಗೂ ಆಲಮಟ್ಟಿಯಲ್ಲಿ ಭಾನುವಾರ ಹೆಚ್ಚಿನ ಮಳೆಯಾಗಿದೆ.