ಆರೋಪಿಗಳ ಬಳಿ ಹಣ ಪಡೆದು ಸಂಧಾನ ;ಪಿಎಸ್​ಐ ಪರಶುರಾಮ ಕುಟುಂಬಸ್ಥರ ವಿರುದ್ಧ ಆರೋಪ

Ravi Talawar
ಆರೋಪಿಗಳ ಬಳಿ ಹಣ ಪಡೆದು ಸಂಧಾನ ;ಪಿಎಸ್​ಐ ಪರಶುರಾಮ ಕುಟುಂಬಸ್ಥರ ವಿರುದ್ಧ ಆರೋಪ
WhatsApp Group Join Now
Telegram Group Join Now

ಯಾದಗಿರಿ: ಯಾದಗಿರಿ ಪೊಲೀಸ್ ಠಾಣೆಯ ಪಿಎಸ್‌ಐ ಪರಶುರಾಮ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಳಿ ಹಣ ಪಡೆದು ಸಂಧಾನ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಮೃತ ಪರಶುರಾಮ ಅವರ ಮಾವ ಹಾಗೂ ಕುಟುಂಬಸ್ಥರ ವಿರುದ್ಧ ಈ ಆರೋಪ ಕೇಳಿಬಂದಿದೆ. ಆದರೆ, ನಾವು ಯಾರ ಬಳಿಯೂ ಹಣ ಪಡೆದಿಲ್ಲ ಎಂದು ಪರಶುರಾಮ ಅವರ ಮಾವ ವೆಂಕಟಸ್ವಾಮಿ ಯಾದಗಿರಿ ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ನಾವು ಅಳಿಯನನ್ನು ಕಳೆದುಕೊಂಡ ದುಃಖದಿಂದ ಇನ್ನೂ ಹೊರಬಂದಿಲ್ಲ. ಆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ಇನ್ನೂ ನಮಗೆ ಕೊಟ್ಟಿಲ್ಲ. ಈಗಾಗಲೇ ಈ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಸಿಐಡಿ ಅಧಿಕಾರಿಗಳು ಸರಿಯಾಗಿಯೇ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನಮ್ಮ ಮನೆಗೆ ಬಂದು ನಮ್ಮ ಮಗಳಿಂದ ಮಾಹಿತಿ ಪಡೆದಿದ್ದಾರೆ. ನಮ್ಮ ಹೋರಾಟಕ್ಕೆ ಸಾಕಷ್ಟು ಸಂಘಟನೆಗಳು ಸಹಕಾರ ನೀಡಿದ್ದವು. ಹೋರಾಟಗಾರರು ಸಹ ಯಾರಿಂದಲೂ ಹಣ ಪಡೆದಿಲ್ಲ ಎಂದು ವೆಂಕಟಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
WhatsApp Group Join Now
Telegram Group Join Now
Share This Article