ದೆಹಲಿ ಸ್ಫೋಟ ಪ್ರಕರಣದಲ್ಲಿ ಮತ್ತೊಬ್ಬನ ಬಂಧನ

Ravi Talawar
ದೆಹಲಿ ಸ್ಫೋಟ ಪ್ರಕರಣದಲ್ಲಿ ಮತ್ತೊಬ್ಬನ ಬಂಧನ
WhatsApp Group Join Now
Telegram Group Join Now
ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದಲ್ಲಿ ಹಲವು ಸಾವು ನೋವುಗಳು ಸಂಭವಿಸಿದೆ. ಕನಿಷ್ಠ 15 ಮಂದಿ ಬಲಿಯಾಗಿದ್ದರೆ ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಇದೀಗ ಮತ್ತೊಬ್ಬ ಆರೋಪಿಯನ್ನು ಎನ್​ಐಎ ತಂಡ ಪತ್ತೆ ಹಚ್ಚಿದೆ. ಆತ್ಮಹತ್ಯಾ ಬಾಂಬರ್​ ನಬಿಗೆ ಸಹಾಯ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. 
ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಆತ್ಮಹತ್ಯಾ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎ ಕಾರ್ಯಾಚರಣೆ ವೇಗವಾಗಿ ನಡೆಯುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)  ಪ್ರಕರಣದಲ್ಲಿ ಈಗ ಏಳನೇ ಆರೋಪಿಯನ್ನು ಬಂಧಿಸಿದೆಫರಿದಾಬಾದ್‌ನ ಧೌಜ್ ನಿವಾಸಿಅಲ್ ಫಲಾಹ್ ವಿಶ್ವವಿದ್ಯಾಲಯದ ಉದ್ಯೋಗಿ ಸೋಯಾಬ್ ಅಲಿಯಾಸ್ ಸೋಯಾಬ್ ಖಾನ್ ಅವರನ್ನು ಎನ್‌ಐಎ ತಂಡ ಬಂಧಿಸಿದೆ.
WhatsApp Group Join Now
Telegram Group Join Now
Share This Article