ಕೃಷ್ಣಾ ಸಹಕಾರಿ ಸಕ್ಕರೆ ಕಾರಖಾನೆಗೆ ಮತ್ತೊಂದು ಗರಿ; 2023-24ರ ಹಂಗಾಮಿನ “ಅತ್ಯುತ್ತಮ ತಾಂತ್ರಿಕ ದಕ್ಷತೆ ಪ್ರಶಸ್ತಿ”  

Ravi Talawar
ಕೃಷ್ಣಾ ಸಹಕಾರಿ ಸಕ್ಕರೆ ಕಾರಖಾನೆಗೆ ಮತ್ತೊಂದು ಗರಿ; 2023-24ರ ಹಂಗಾಮಿನ “ಅತ್ಯುತ್ತಮ ತಾಂತ್ರಿಕ ದಕ್ಷತೆ ಪ್ರಶಸ್ತಿ”  
WhatsApp Group Join Now
Telegram Group Join Now

ಅಥಣಿ:  ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ “ರಾಜ್ಯದಲ್ಲಿ 2023-24ರ ಕ್ರಷಿಂಗ್ ಸೀಸನ್‌ಗಾಗಿ “ಅತ್ಯುತ್ತಮ ತಾಂತ್ರಿಕ ದಕ್ಷತೆ ಪ್ರಶಸ್ತಿ (ಸಹಕಾರಿ ಸಕ್ಕರೆ ಕಾರ್ಖಾನೆ)”ಗೆ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಗೆ ಲಭಿಸಿರುವದು ಅತ್ಯಾಂತ ಸಂತೋಷದಾಯಕ ಸಂಗತಿಯಾಗಿದೆ ಎಂದು ಕಾರಖಾನೆ ಅಧ್ಯಕ್ಷ ಪರಪ್ಪ ಸವದಿ ಹೇಳಿದರು
ತಾಲೂಕಿನ ಸಂಕೋನಟ್ಟಿ ಗ್ರಾಮದ ಬಳಿಯ ಕೃಷ್ಣಾ ಸಹಕಾರಿ ಸಕ್ಕರೆ ಕಾರಖಾನೆ ಕಛೇರಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲೇ ಸಹಕಾರಿ ರಂಗದ ಸಕ್ಕರೆ ಕಾರಖಾನೆಗಳಲ್ಲಿ ಅತ್ಯುತ್ತಮ ತಾಂತ್ರಿಕ ನಿರ್ವಹಣೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದೆ. ಯಾವುದೇ ಉದ್ಯಮದ ಉತ್ತಮ ಕಾರ್ಯಕ್ಷಮತೆಯನ್ನು ಗುರುತಿಸುವುದು ಜೊತೆಗೆ ಮತ್ತಷ್ಟು ಸುಧಾರಿಸಲು ಮತ್ತು ಇತರರು ಸ್ಪರ್ಧಿಸಲು ಪ್ರೋತ್ಸಾಹಿಸುತ್ತದೆ. ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ, ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ತಾಂತ್ರಿಕ ನಿಯತಾಂಕಗಳಲ್ಲಿನ ಅವುಗಳ ಕಾರ್ಯಕ್ಷಮತೆಯ ಆಧಾರದ ತಾಲೂಕಿನ ಕೃಷ್ಣಾ ಸಹಕಾರಿ ಕಾರಖಾನೆಗೆ ಪ್ರಶಸ್ತಿ 2023-24 ರ ಕ್ರಷಿಂಗ್ ಸೀಸನ್‌ಗಾಗಿ ರಾಜ್ಯದ ಸಕ್ಕರೆ ಕಾರ್ಖಾನೆಗಳು ಸಲ್ಲಿಸಿದ ಆರ್‌ಟಿಬಿ (ಸಿ) ಪ್ರಕಾರ ತಾಂತ್ರಿಕ ನಿಯತಾಂಕಗಳ ವಿಶ್ಲೇಷಣೆ ಆಧಾರದ ಮೇಲೆ ಪ್ರಶಸ್ತಿ ನಮ್ಮ ಕಾರಖಾನೆಗೆ ಸಿಕ್ಕಿದ್ದು ಸಂತೋಷದ ಜೊತೆಗೆ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಹೇಳಿದರು.
ಪ್ರಶಸ್ತಿಯನ್ನು ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಅಧ್ಯಕ್ಷ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವರು ಶಿವಾನಂದ ಪಾಟೀಲ ಅವರು ಬೆಳಗಾವಿಯ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅದ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯ ಸದಸ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಿದರು
ಈ ವೇಳೆ ಉಪಾಧ್ಯಕ್ಷ ಶಂಕರ ವಾಗಮೋಡೆ, ನಿರ್ದೇಶಕರಾದ ಗುರುಬಸು ತೇವಮನಿ, ಶಾಂತಿನಾಥ ನಂದೇಶ್ವರ, ಘೋಳಪ್ಪ ಜತ್ತಿ, ರಮೇಶ ಪಟ್ಟಣ, ವಿಶ್ವನಾಥ ಪಾಟೀಲ, ರುಕ್ಮೀಣಿ ಕುಲಕರ್ಣಿ, ಸೌರಭ ಪಾಟೀಲ, ಸುನಂದಾ ನಾಯಿಕ, ಸಿದ್ರಾಯ ನಾಯಿಕ, ಮಲ್ಲಿಕಾರ್ಜುನ ಗೋಟಖಿಂಡಿ, ಹಣಮಂತ ಜಗದೇವ, ವ್ಯವಸ್ಥಾಕ ನಿರ್ದೇಶಕ ಜಿ ಎಮ್ ಪಾಟೀಲ, ಮುಖಂಡ ಶ್ರೀಶೈಲ ನಾಯಿಕ, ಮುಖ್ಯ ಲೆಕ್ಕಾಧಿಕಾರಿ ಶಂಕರ ಗೋಟಖಿಂಡಿ,  ವಿನಾಯಕ ಮನಗೂಳಿ, ಸುರೇಶ ಠಕ್ಕಣ್ಣವರ, ಹೆಚ್ ಡಿ ಧರಿಗೌಡರ,  ಸಿ ಎಸ್ ಪಾಟೀಲ, ಡಿ ಬಿ ದೇಸಾಯಿ

WhatsApp Group Join Now
Telegram Group Join Now
Share This Article