ಬಳ್ಳಾರಿ,ನ.05ನಗರದ ದ್ವಾರಕ ಲಾಡ್ಜ್ ನಲ್ಲಿ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿನ ಗುಮ್ಮಗಟ್ಟ ಮಂಡಲದ ಗಲಗಲ ಗ್ರಾಮದ ನಿವಾಸಿ ರಾಮಾಂಜಿನೇಯಲು ಎನ್ನುವ 50 ವರ್ಷದ ವ್ಯಕ್ತಿಯು ಅ.29 ರಂದು ಕಾಣೆಯಾರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5 ಅಡಿ ಎತ್ತರ, ದುಂಡುಮುಖ, ಗೋದಿ ಮೈಬಣ್ಣ, ದೃಢ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಅರಿಶಿಣ ಬಣ್ಣ ಆಫ್ ತೋಳಿನ ಅಂಗಿ ಮತ್ತು ಬಾದಾಮಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, 9480803096 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವ್ಯಕ್ತಿ ಕಾಣೆ: ಪತ್ತೆಗೆ ಮನವಿ


